Advertisement

Agricultural scientist ತಳಿ ಸಂಶೋಧಕ ಡಾ. ಎಸ್.ಎ.ಪಾಟೀಲ್ ನಿಧನ

05:03 PM Jul 15, 2024 | Team Udayavani |

ಕಲಬುರಗಿ: ಕೃಷಿ ಕ್ಷೇತ್ರಕ್ಕೆ ತನ್ನದೆ ಆದ ಕೋಡುಗೆ ನೀಡಿದ ಕರ್ನಾಟಕ ಕೃಷಿ ಮಿಷನ್ ಮಾಜಿ ಚೇರಮನ್, ನವದೆಹಲಿಯ ಅಗ್ರಿಕಲ್ಚರ್ ರಿಸರ್ಚ ಇನ್ಸ್ಟಿಟ್ಯೂಟ್ ನಿರ್ದೇಶಕ, ಕರ್ನಾಟಕ ಕೃಷಿ ವಿಶ್ವವಿದ್ಯಾಲಯದ ವೈಸ್ ಚೇರಮನ್ ಆಗಿ ಸೇವೆ ಸಲ್ಲಿಸಿದ ಕೃಷಿ ವಿಜ್ಞಾನಿ ಡಾ.ಎಸ್.ಎ.ಪಾಟೀಲ (78) ನಿಧನ ಹೊಂದಿದ್ದಾರೆ.

Advertisement

ಹೊಸ ಹತ್ತಿ ಬೀಜಗಳ ಸಂಶೋಧನೆ ಸೇರಿ ದಂತೆ ಹಲವಾರು ತಳಿಗಳನ್ನು ಸಂಶೋಧನೆ ಮಾಡಿರುವ ಡಾ.‌ಎಸ್.‌ಎ.ಪಾಟೀಲ್ ರಾಯಚೂರಿನಲ್ಲಿ ಕೃಷಿ ವಿವಿಯಾಗಲು ಪ್ರಮುಖ ಪಾತ್ರ ವಹಿಸಿದ್ದರು. ‌

ಮೃತರಿಗೆ ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಇದ್ದಾರೆ.‌ ಆ ಪೈಕಿ ಮೂವರು ಮಕ್ಕಳು ವಿದೇಶದಲ್ಲಿದ್ದು,ಬುಧವಾರ (ಜುಲೈ 17) ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.‌

Advertisement

Udayavani is now on Telegram. Click here to join our channel and stay updated with the latest news.

Next