Advertisement

Agriculture Expert: Live ಕಾರ್ಯಕ್ರಮದ ವೇಳೆ ಕುಸಿದು ಬಿದ್ದು ಮೃತಪಟ್ಟ ಕೃಷಿ ತಜ್ಞ

03:54 PM Jan 13, 2024 | Team Udayavani |

ತಿರುವನಂತಪುರಂ: ದೂರದರ್ಶನ ನೇರ ಪ್ರಸಾರ ಕಾರ್ಯಕ್ರಮದ ವೇಳೆ ಕೃಷಿ ವಿಶ್ವವಿದ್ಯಾಲಯದ ನಿರ್ದೇಶಕರಾದ ಡಾ. ಅನಿ. ಎಸ್. ದಾಸ್ (59) ಅವರು ಕುಸಿದುಬಿದ್ದು ಮೃತಪಟ್ಟಿದ್ದಾರೆ.

Advertisement

ಶುಕ್ರವಾರ ಕೇರಳದ ತಿರುವನಂತಪುರಂನಲ್ಲಿರುವ ದೂರದರ್ಶನ ವಾಹಿನಿಯಲ್ಲಿ ಕೃಷಿ ದರ್ಶನ ಕಾರ್ಯಕ್ರಮದ ನಡೆಯುತ್ತಿದ್ದ ವೇಳೆ ಈ ಘಟನೆ ನಡೆದಿದೆ.

ಘಟನೆ ನಡೆದ ಕೂಡಲೇ ಅವರನ್ನು ತಿರುವನಂತಪುರಂ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟೋತ್ತಿಗಾಗಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.

ದಾಸ್ ಅವರು ಕೇರಳ ಫೀಡ್ಸ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕರಾಗಿ ಸೇವೆ ಸಲ್ಲಿಸಿದರು ಮತ್ತು ಕೇರಳ ಕೃಷಿ ವಿಶ್ವವಿದ್ಯಾಲಯದಲ್ಲಿ ಸಂವಹನ ಕೇಂದ್ರದ ಮುಖ್ಯಸ್ಥರಾಗಿದ್ದರು.

ಇದನ್ನೂ ಓದಿ: T20 Cricket; ವಿರಾಟ್ ಕೊಹ್ಲಿ ಆಕ್ರಮಣಕಾರಿ ಮನಸ್ಥಿತಿಯೊಂದಿಗೆ ಆಡಬೇಕಿದೆ: ರೈನಾ

Advertisement
Advertisement

Udayavani is now on Telegram. Click here to join our channel and stay updated with the latest news.

Next