Advertisement
ವಸ್ತು ಪ್ರದರ್ಶನ: ಪ್ರತಿ ವರ್ಷದಂತೆ ಈ ವರ್ಷ ಕೃಷಿ ಅಭಿಯಾನ ವೇದಿಕೆ ಕಾರ್ಯಕ್ರಮ ಹಿನ್ನಲೆಯಲ್ಲಿ ಕೃಷಿ ಮತ್ತು ಕೃಷಿಯೇತರ ಇಲಾಖೆಗಳು ಕೃಷಿ ಸಂಬಂಧಿಸಿದ ಹಾಗೂ ಇಲಾಖೆಯಿಂದ ಸಿಗುವ ಸೌಲಭ್ಯಗಳ ಕುರಿತ ಏರ್ಪಡಿಸಿದ್ದ ವಸ್ತು ಪ್ರದರ್ಶನವನ್ನು ಶಾಸಕ ಅನಿಲ್ ಚಿಕ್ಕಮಾದು ಉದ್ಘಾಟಿಸಿದರು.
Related Articles
Advertisement
ರೈತರ ತರಾಟೆ: ಹಿರಿಯ ಸಾಹಿತಿ ಗಿರೀಶ್ ಕಾರ್ನಾಡ್ ನಿಧನ ಹಿನ್ನಲೆಯಲ್ಲಿ ಕಾರ್ಯಕ್ರಮ ಮೊಟಕುಗೊಳಿಸಿ ಶಾಸಕರು ಅತ್ತ ಹೊರಡುತ್ತಿದ್ದಂತೆ ಇತ್ತ ರೈತ ಸಂಘದ ಪದಾಧಿಕಾರಿಗಳು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಜಯರಾಮಯ್ಯ ಅವರನ್ನು ಹಿಗ್ಗಾಮುಗ್ಗಾ ತರಾಟೆ ತಗೆದುಕೊಂಡರು.
ನಮ್ಮನ್ನು ಕಾರ್ಯಕ್ರಮಕ್ಕೆ ಆಹ್ವಾನ ನೀಡಿ ಕರೆದ ಮೇಲೆ ಗೌರವವಾಗಿ ನಡೆಸಿಕೊಳ್ಳಬೇಕು, ಇಂತಹ ಕಾರ್ಯಕ್ರಮಕ್ಕೆ ನಮ್ಮನ್ನು ಏಕೆ ಕರೆಯುತ್ತೀರಿ, ಶಾಸಕರೊಬ್ಬರನ್ನೇ ಕರೆಸಿಕೊಂಡು ಕಾರ್ಯಕ್ರಮ ಮಾಡಿಕೊಳ್ಳಬಹುದಿತ್ತಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಜಿಪಂ ಅಧ್ಯಕ್ಷೆ ಪರಿಮಳಾ ಶ್ಯಾಮ್, ತಾಪಂ ಸದಸ್ಯ ಟಿ.ವೆಂಕಟೇಶ್, ಪ್ರಗತಿಪರ ರೈತ ಮಲಾರ ಪುಟ್ಟಯ್ಯ, ಹಿರಿಯ ಮುಖಂಡ ಚಾ.ನಂಜುಂಡಮೂರ್ತಿ, ಪುರಸಭಾ ಸದಸ್ಯ ನರಸಿಂಹಮೂರ್ತಿ, ಟಿಎಪಿಸಿಎಂಎಸ್ ಅಧ್ಯಕ್ಷ ಕೃಷ್ಣ, ಪುರಸಭೆ ಮಾಜಿ ಸದಸ್ಯ ಅನಿಲ್,
ಮುಖಂಡರಾದ ವನಸಿರಿ ಶಂಕರ್, ಆದಿವಾಸಿ ಮುಖಂಡ ಕಾವೇರ, ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ ಮಹದೇವನಾಯ್ಕ, ತಾಲೂಕು ಅಧ್ಯಕ್ಷ ರವಿಕುಮಾರ್, ದೇವಲಾಪುರ ಶಿವಣ್ಣ, ಕೃಷಿ ಅಧಿಕಾರಿಗಳಾದ ಪ್ರದೀಪ್, ಗಂಗಾಧರ್, ಗುರುಪ್ರಸಾದ್, ಹರೀಶ್ ಇತರರು ಉಪಸ್ಥಿತರಿದ್ದರು.