Advertisement

ತಂತ್ರಜ್ಞಾನದಿಂದ ಕೃಷಿ ಲಾಭದಾಯಕ: ಪ್ರಮೋದ್‌

08:40 AM Oct 15, 2017 | Team Udayavani |

ಬ್ರಹ್ಮಾವರ: ಆಧುನಿಕ ತಂತ್ರಜ್ಞಾನದ ಅಳವಡಿಕೆಯಿಂದ ಕೃಷಿಯನ್ನು ಲಾಭದಾಯಕವಾಗಿ ನಡೆಸಲು ಸಾಧ್ಯ. ಕೃಷಿಯ ಬಗ್ಗೆ ಮಾರುಕಟ್ಟೆಯಲ್ಲಿ ಏನೆಲ್ಲ ತಂತ್ರಜ್ಞಾನಗಳಿವೆ ಎನ್ನುವ ಮಾಹಿತಿಯನ್ನು ಕೃಷಿ ಮೇಳಗಳು ನೀಡುತ್ತವೆ ಎಂದು ಸಚಿವ ಪ್ರಮೋದ್‌ ಮಧ್ವರಾಜ್‌ ಹೇಳಿದರು.

Advertisement

ಅವರು ಶನಿವಾರ ಬ್ರಹ್ಮಾವರ ಕೃಷಿ ವಿಜ್ಞಾನ ಕೇಂದ್ರದಲ್ಲಿ ಶಿವಮೊಗ್ಗ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾನಿಲಯದ ಅಂಗ ಸಂಸ್ಥೆಯಾದ ಬ್ರಹ್ಮಾವರ ವಲಯ ಕೃಷಿ ಮತ್ತು ತೋಟಗಾರಿಕಾ ಸಂಶೋಧನಾ ಕೇಂದ್ರ, ಉಳ್ಳಾಲ ಐಸಿಎಆರ್‌, ಬ್ರಹ್ಮಾವರ ಕೆವಿಕೆ,
ಡಿಪ್ಲೊಮಾ ಕೃಷಿ ಮಹಾವಿದ್ಯಾಲಯ, ಕೊಚ್ಚಿ ಗೇರು ಮತ್ತು ಕೋಕೋ ಅಭಿವೃದ್ಧಿ ನಿರ್ದೇಶನಾಲಯ, ಮಂಗಳೂರು ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್‌, ಕೃಷಿ ಇಲಾಖೆ, ತೋಟಗಾರಿಕಾ ಇಲಾಖೆ ಮತ್ತು ಮತ್ತಿತರರ ಸಂಘ – ಸಂಸ್ಥೆಗಳ ಸಹಯೋಗ
ದೊಂದಿಗೆ ಎರಡು ದಿನಗಳ ಕಾಲ ನಡೆಯುವ ಕೃಷಿ ಮೇಳವನ್ನು ಉದ್ಘಾಟಿಸಿ ಮಾತನಾಡಿದರು. ಪ್ರಸ್ತುತ ರೈತರಿಗೆ ನಿರೀಕ್ಷಿತ ಆದಾಯದ ಕೊರತೆ ಎದ್ದು ಕಾಣುತ್ತಿದೆ. ಕೃಷಿ ಲಾಭದಾಯಕವಾಗಲು ಕೃಷಿ ವಿಜ್ಞಾನಿಗಳು ಹೆಚ್ಚಿನ ಸಂಶೋಧನೆ ಮತ್ತು ಹೊಸ ಹೊಸ ತಂತ್ರಜ್ಞಾನ ನೀಡುವ ಅಗತ್ಯವಿದೆ ಎಂದರು.

ಎಪಿಎಂಸಿ ಮಾದರಿ
ರಾಜ್ಯದಲ್ಲಿ ರೈತರು ಬೆಳೆದ ಉತ್ನನ್ನಗಳನ್ನು ನೇರವಾಗಿ ಎಪಿಎಂಸಿ ಮೂಲಕ ಮಾರಾಟ ಮಾಡುವ ವ್ಯವಸ್ಥೆ ಮಾಡಲಾಗಿದ್ದು ಇದರಿಂದ ಅ ಧಿಕ ಲಾಭ ಪಡೆಯುತ್ತಿದ್ದಾರೆ. ಇದೇ ಮಾದರಿಯನ್ನು ಇತರ ರಾಜ್ಯಗಳಲ್ಲಿಯೂ ಪ್ರಾರಂಭಿಸುವ ಬಗ್ಗೆ ಚಿಂತನೆ ನಡೆಸಲಾ
ಗುತ್ತಿದೆ ಎಂದು ಪ್ರಮೋದ್‌ ಹೇಳಿದರು. ಕೃಷಿ ಭಾಗ್ಯ ಯೋಜನೆ, ಉದ್ಯೋಗ ಖಾತರಿ ಯೋಜನೆಯಿಂದ ಕೃಷಿಕರಿಗೆ ಲಾಭವಾಗಿದೆ. ಅನೇಕ ಕೃಷಿ ಉಪಕರಣಗಳಿಗೆ ಸಬ್ಸಿಡಿ ನೀಡಲಾಗುತ್ತಿದ್ದು ಇದರ ಉಪಯೋಗವನ್ನು ರೈತರು ಪಡೆದುಕೊಳ್ಳುವಂತಾಗಬೇಕು ಎಂದರು.

ಶಿವಮೊಗ್ಗ ಕೃಷಿ ಮತ್ತು ತೋಟಗಾರಿಕಾ ವಿ.ವಿ. ಕುಲಪತಿ ಡಾ| ಪಿ. ನಾರಾಯಣ ಸ್ವಾಮಿ ಅಧ್ಯಕ್ಷತೆ ವಹಿಸಿದ್ದರು. ಮಣಿಪಾಲ ಭಾರತೀಯ ವಿಕಾಸ ಟ್ರಸ್ಟ್‌ನ ಕೆ.ಎಂ. ಉಡುಪ, ಜಿ.ಪಂ. ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ತಾ.ಪಂ. ಅಧ್ಯಕ್ಷೆ ನಳಿನಿ ಪ್ರದೀಪ್‌ ರಾವ್‌ ತಾಂತ್ರಿಕ ಕೈಪಿಡಿ ಬಿಡುಗಡೆಗೊಳಿಸಿದರು.

ವಿಧಾನ ಪರಿಷತ್‌ ಸದಸ್ಯರಾದ ಕೋಟ ಶ್ರೀನಿವಾಸ ಪೂಜಾರಿ, ಪ್ರತಾಪ್‌ ಚಂದ್ರ ಶೆಟ್ಟಿ, ಚಾಂತಾರು ಗ್ರಾ.ಪಂ. ಅಧ್ಯಕ್ಷೆ ಸರಸ್ವತಿ ನಾಯ್ಕ, ಕೆ.ವಿ.ಕೆ. ಶಿವಮೊಗ್ಗದ ವ್ಯವಸ್ಥಾಪನ ಮಂಡಳಿ ಸದಸ್ಯೆ ನೀತು ಯೋಗಿರಾಜ್‌ ಪಾಟೀಲ್‌, ಸಂಶೋಧನಾ ನಿರ್ದೇಶಕ ಡಾ| ಎಂ.ಕೆ. ನಾಯ್ಕ, ವಿಸ್ತರಣಾ ನಿರ್ದೇಶಕ ಡಾ| ಟಿ.ಎಚ್‌. ಗೌಡ, ವಿದ್ಯಾರ್ಥಿ ಕಲ್ಯಾಣ ನಿರ್ದೇಶಕ ಡಾ| ವೈ. ವಿಶ್ವನಾಥ ಶೆಟ್ಟಿ, ಡಾ| ಹನುಮಂತಪ್ಪ, ತೋಟಗಾರಿಕಾ ಇಲಾಖೆಯ ಉಪನಿರ್ದೇಶಕಿ ಭುವನೇಶ್ವರಿ, ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕ ಡಾ| ಅಂತೋನಿ ಮರಿಯಾ ಇಮ್ಯಾನುಯಲ್‌, ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಪುರುಷೋತ್ತಮ್‌, ಪಶುಸಂಗೋಪನಾ ಇಲಾಖೆಯ ಡಾ| ಉಡುಪ ಉಪಸ್ಥಿತರಿದ್ದರು.

Advertisement

ಸಹ ಸಂಶೋಧನಾ ನಿರ್ದೇಶಕ ಡಾ| ಎಸ್‌.ಯು. ಪಾಟೀಲ್‌ ಸ್ವಾಗತಿಸಿ, ಡಾ| ಧನಂಜಯ ವಂದಿಸಿದರು. ವೈಕುಂಠ ಹೇಳೆì ಮತ್ತು ಸಂಜೀವ ಕ್ಯಾತಪ್ಪನವರ್‌ ಕಾರ್ಯಕ್ರಮ ನಿರ್ವಹಿಸಿದರು.

ಕಾಡು ಪ್ರಾಣಿಗಳ ಸಮಸ್ಯೆ
ತಂತ್ರಜ್ಞಾನದ ನೆರವಿನಿಂದ ಜಿಲ್ಲೆಯ ರೈತರು ಬಹಳಷ್ಟು ಮುಂದುವರಿದಿದ್ದರೂ ಕಾಡು ಪ್ರಾಣಿಗಳ ಹಾವಳಿಯಿಂದ ಬೇಸತ್ತಿದ್ದು, ಸಮಸ್ಯೆ
ಪರಿಹಾರಕ್ಕೆ ಅರಣ್ಯ ಸಚಿವರ, ಅಧಿಕಾರಿಗಳ, ಜನಪ್ರತಿನಿಧಿಗಳ ಹಾಗೂ ರೈತರ ಸಭೆ ಕರೆದು ಪರಿಹಾರಕ್ಕೆ ಯತ್ನಿಸಲಾಗುವುದು. 
ಸಚಿವ ಪ್ರಮೋದ್‌ ಮಧ್ವರಾಜ್‌  

Advertisement

Udayavani is now on Telegram. Click here to join our channel and stay updated with the latest news.

Next