Advertisement

ಶಾಲಾ ವಿದ್ಯಾರ್ಥಿಗಳಿಗೆ ಗದ್ದೆಯಲ್ಲಿ ಕೃಷಿ ಪಾಠ

09:37 PM Jul 12, 2019 | Team Udayavani |

ಕೊಲ್ಲೂರು: ಕೃಷಿ ಬಗ್ಗೆ ಎಳವೆಯಲ್ಲೇ ವಿದ್ಯಾರ್ಥಿಗಳಲ್ಲಿ ಆಸಕ್ತಿ ಮೂಡಿಸುವ ಉದ್ದೇಶದಿಂದ ವಂಡ್ಸೆ ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳು ಜು.10ರಂದು ವಂಡ್ಸೆ ಸಮೀಪದ ಕಲ್ಮಾಡಿಯ ನಾಟಿ ಗದ್ದೆಯಲ್ಲಿ ನೇಜಿ ನಾಟಿ ಮಾಡಿದರು.

Advertisement

ವಂಡ್ಸೆ ಗ್ರಾ.ಪಂ. ಮಾಜಿ ಅಧ್ಯಕ್ಷ ಶ್ರೀನಿವಾಸ ಪೂಜಾರಿಯವರ ಗದ್ದೆಯಲ್ಲಿ ವಿದ್ಯಾರ್ಥಿಗಳು ನೇಜಿ ನೆಟ್ಟು ಸಂಭ್ರಮಿಸಿದರು. ನಾಟಿ ವಿಧಾನ, ಪ್ರಕ್ರಿಯೆ, ಸಸ್ಯ ಸಂರಕ್ಷಣೆ ಇತ್ಯಾದಿಗಳ ಬಗ್ಗೆ ಶ್ರೀನಿವಾಸ ಪೂಜಾರಿ ಅವರು ಪ್ರಾತ್ಯಕ್ಷಿಕೆ ನಡೆಸಿಕೊಟ್ಟರು.

ಪ್ರಭಾರ ಮುಖ್ಯೋಪಾಧ್ಯಾಯಿನಿ ಆಶಾ, ದೆ„ಹಿಕ ಶಿಕ್ಷಣ ಶಿಕ್ಷಕ ರಾಜು ಎನ್‌. ಮತ್ತು ಸಹಶಿಕ್ಷಕಿ ರೇವತಿ ಅವರು ನೇತೃತ್ವ ವಹಿಸಿದ್ದರು.

ಎಸ್‌.ಡಿ.ಎಂ.ಸಿ. ಅಧ್ಯಕ್ಷ ಮಂಜುನಾಥ ಎ.ಜಿ., ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಂದೇಶ ಶೆಟ್ಟಿ ಅಡಿಕೆಕೊಡ್ಲು, ಸಿವಿಲ್‌ ಗುತ್ತಿಗೆದಾ ರರಾದ ರುದ್ರಯ್ಯ ಆಚಾರ್ಯ, ಎಸ್‌.ಡಿ.ಎಂ.ಸಿ ಸದಸ್ಯ ಶೇಖರ, ಮಾತƒಭೂಮಿ ಯುವ ಸಂಘಟನೆಯ ಮಾಜಿ ಅಧ್ಯಕ್ಷ ರಮೇಶ ಪೂಜಾರಿ, ಚಂದ್ರ ಪೂಜಾರಿ ಕಲ್ಮಾಡಿ, ರವಿ ಮೊದಲಾದವರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next