Advertisement

ಬಜೆಟ್‌ ಘೋಷಣೆ ಅನುಷ್ಠಾನ ಸಮಿತಿಗೆ ಕೃಷಿ ಸಚಿವ ಶಿವರಾಜ್‌ ಚೌಹಾಣ್‌

10:21 PM Oct 22, 2024 | Team Udayavani |

ನವದೆಹಲಿ: ಕೇಂದ್ರ ಬಜೆಟ್‌ನಲ್ಲಿ ಘೋಷಣೆ ಮಾಡಲಾಗಿರುವ ಯೋಜನೆಗಳ ಜಾರಿ ಹೊಣೆಯನ್ನು ಕೇಂದ್ರ ಕೃಷಿ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರಿಗೆ ನೀಡಲಾಗಿದೆ.

Advertisement

ಯೋಜನೆಗಳ ಅನುಷ್ಠಾನದ ಬಗ್ಗೆ ಪರಾಮರ್ಶೆ ನಡೆಸಲು ಉನ್ನತ ಮಟ್ಟದ ಸಮಿತಿಯನ್ನೂ ರಚಿಸಲಾಗಿತ್ತು. ಅದರ ಸಭೆ ನವದೆಹಲಿಯಲ್ಲಿ ಪ್ರಧಾನಮಂತ್ರಿಗಳ ಕಚೇರಿಯಲ್ಲಿ ನಡೆದಿತ್ತು. 2014ರಲ್ಲಿ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಘೋಷಣೆ ಮಾಡಿದ ಸೇರಿದಂತೆ ಸರ್ಕಾರದ ಹಲವು ಯೋಜನೆಗಳನ್ನು ಸೂಕ್ತ ರೀತಿಯಲ್ಲಿ ಅನುಷ್ಠಾನ ಮಾಡುವುದರ ಮೇಲೆ ನಿಗಾ ಇರಿಸಲಿದೆ. ಜತೆಗೆ ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳ ಜತೆಗೆ ಸಮನ್ವಯ ಸಾಧಿಸುವ ಬಗ್ಗೆಯೂ ಈ ಸಮಿತಿ ಕೆಲಸ ಮಾಡಲಿದೆ.

Advertisement

Udayavani is now on Telegram. Click here to join our channel and stay updated with the latest news.

Next