Advertisement

ಆಗುಂಬೆ ಘಾಟಿಯಲ್ಲಿ ಗುಡ್ಡ‌ ಕುಸಿತ : ಜುಲೈ 12ರವರೆಗೆ ವಾಹನ ಸಂಚಾರ ನಿರ್ಬಂಧ

05:53 PM Jul 10, 2022 | Team Udayavani |

ಶಿವಮೊಗ್ಗ : ಆಗುಂಬೆ ಘಾಟಿಯ ಹನ್ನೊಂದನೇ ತಿರುವಿನಲ್ಲಿ‌ ಗುಡ್ಡ ಕುಸಿದ ಪರಿಣಾಮ ರಸ್ತೆ ಸಂಚಾರ ಬಂದ್ ಆಗಿದ್ದು ಭಾರಿ ಮಳೆ ಸುರಿಯುತ್ತಿರುವ ಕಾರಣ ಮಣ್ಣು ತೆರವು ಕಾರ್ಯಾಚರಣೆ ವಿಳಂಬವಾಗಿದ್ದು ಆಗುಂಬೆ ಘಾಟಿಯಲ್ಲಿ ಎಲ್ಲ ವಾಹನಗಳ ಸಂಚಾರ ಜುಲೈ 12ರ ಬೆಳಗ್ಗೆ 8 ಗಂಟೆವರೆಗೆ ನಿರ್ಬಂಧ ವಿಧಿಸಲಾಗಿದೆ.

Advertisement

ಜುಲೈ 12 ರಿಂದ 30 ರವರೆಗೆ ಆಗುಂಬೆ ಘಾಟಿಯಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ ಮಾಡಿ ಕೊಡಲಾಗುವುದು. ಅಲ್ಲದೆ ಭಾರಿ ವಾಹನಗಳು ಬದಲಿ ಮಾರ್ಗದಲ್ಲಿ ಸಂಚರಿಸುವಂತೆ ಶಿವಮೊಗ್ಗ ಜಿಲ್ಲಾಧಿಕಾರಿ‌ ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ.

ಬದಲಿ‌ ಮಾರ್ಗಗಳ ವಿವರ :

1. ತೀರ್ಥಹಳ್ಳಿ, ಕೊಪ್ಪ, ಶೃಂಗೇರಿ, ಕಾರ್ಕಳ, ಮಂಗಳೂರು.

2. ತೀರ್ಥಹಳ್ಳಿ, ಆಗುಂಬೆ, ಶೃಂಗೇರಿ, ಕಾರ್ಕಳ, ಮಂಗಳೂರು

Advertisement

3. ತೀರ್ಥಹಳ್ಳಿ, ಮಾಸ್ತಿಕಟ್ಟೆ, ಕುಂದಾಪುರ ಮಾರ್ಗದಲ್ಲಿ ವಾಹನ ಸಂಚಾರ ನಡೆಸುವಂತೆ ಸೂಚನೆ

ಇದನ್ನೂ ಓದಿ : ಶ್ರೀಲಂಕಾದಲ್ಲಿ ಸರ್ವಪಕ್ಷ ಸರಕಾರ ರಚನೆಯ ಕಸರತ್ತು ; ಪ್ರಕ್ಷುಬ್ಧತೆಗೆ ಪರಿಹಾರ?

Advertisement

Udayavani is now on Telegram. Click here to join our channel and stay updated with the latest news.

Next