Advertisement

ಆಗುಂಬೆ ಘಾಟಿ ರಸ್ತೆ: ಪ್ರಧಾನಿ ಬಳಿ ಚರ್ಚೆ

06:20 AM Jul 24, 2018 | Team Udayavani |

ತೀರ್ಥಹಳ್ಳಿ: ಆಗುಂಬೆ ಘಾಟಿ ರಸ್ತೆ ಅಭಿವೃದ್ಧಿ ಬಗ್ಗೆ ಕೇಂದ್ರ ಹೆದ್ದಾರಿ ಹಾಗೂ ಸಾರಿಗೆ ಸಚಿವ ನಿತಿನ್‌ ಗಡ್ಕರಿ ಹಾಗೂ ಪ್ರಧಾನಿ ಮೋದಿಯವರೊಂದಿಗೆ ಚರ್ಚಿಸಿ ಸೂಕ್ತ ಅನುದಾನ ತರಲು ಯತ್ನಿಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಹೇಳಿದರು.

Advertisement

ಭಾನುವಾರ ಆಗುಂಬೆ ಘಾಟಿ ರಸ್ತೆ ದುಸ್ಥಿತಿ ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ರಾಷ್ಟ್ರೀಯ ಹೆದ್ದಾರಿ ಮಾರ್ಗದ ಪ್ರಮುಖ ಮೂರು ಜಿಲ್ಲೆಗಳ ಸಂಪರ್ಕ ಸೇತುವಾದ ಆಗುಂಬೆ ಘಾಟಿ ರಸ್ತೆ ಪ್ರಮುಖವಾಗಿದೆ. ಈ ರಸ್ತೆಯ ಆಧುನೀಕರಣಕ್ಕೆ ರಾಜ್ಯ ಸರ್ಕಾರದೊಂದಿಗೂ ಚರ್ಚೆ ನಡೆಸುವೆ ಎಂದರು. ಇದೇ ವೇಳೆ ಶಾಸಕ ಆರಗ ಜ್ಞಾನೇಂದ್ರ ಅವರು ಆಗುಂಬೆ ಘಾಟಿ ರಸ್ತೆ ಸ್ಥಿತಿ ಹಾಗೂ ರಸ್ತೆ ಅಗಲೀಕರಣದ ಬಗ್ಗೆ ಯಡಿಯೂರಪ್ಪ ಅವರಿಗೆ ಮಾಹಿತಿ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next