Advertisement

ಆಗುಂಬೆ: ಇಂದಿನಿಂದ ಬಸ್‌ ಸಂಚಾರ

09:13 AM Jun 30, 2018 | Team Udayavani |

ಹೆಬ್ರಿ: ಭೂಕುಸಿತವಾಗಿ ರಸ್ತೆ ಸಂಚಾರ ಸ್ಥಗಿತವಾಗಿದ್ದ ಆಗುಂಬೆ ಘಾಟಿ ರಸ್ತೆಯಲ್ಲಿ ತಾತ್ಕಾಲಿಕ ದುರಸ್ತಿ ನಡೆಸಲಾಗಿದ್ದು, ಶನಿವಾರದಿಂದ ಬಸ್‌ಗಳ ಸಂಚಾರಕ್ಕೆ ಜಿಲ್ಲಾಧಿಕಾರಿ ಅವಕಾಶ ಕಲ್ಪಿಸಿದ್ದಾರೆ.

Advertisement

ರಾಷ್ಟ್ರೀಯ ಹೆದ್ದಾರಿ 169ಎ ರಸ್ತೆಯ ಆಗುಂಬೆ ಘಾಟಿಯ 7ನೇ ತಿರುವಿನಲ್ಲಿ ಗುರುವಾರ ಕುಸಿತ ಸಂಭವಿಸಿದ್ದು, ಬಸ್‌, ಟೆಂಪೋ ಇತ್ಯಾದಿ ಘನ ವಾಹನಗಳ ಸಂಚಾರವನ್ನು ತಡೆಯಲಾಗಿತ್ತು.

ಕುಸಿತ ಸಂಭವಿಸಿದ ಸ್ಥಳದಲ್ಲಿ ಮರಳು ಚೀಲಗಳನ್ನು ಇರಿಸಿ ಇನ್ನಷ್ಟು ಕುಸಿಯದಂತೆ ಕ್ರಮ ಕೈಗೊಳ್ಳಲಾಗುತ್ತಿದೆ. ಹೆಬ್ರಿ ಠಾಣಾಧಿಕಾರಿ ಮಹಾಬಲ ಶೆಟ್ಟಿ ಹಾಗೂ ಆಗುಂಬೆ ಠಾಣಾಧಿಕಾರಿ ಭಾರತಿ ಸಹಿತ ಪೊಲೀಸ್‌ ತಂಡ ವಿಶೇಷ ಭದ್ರತೆ ಒದಗಿಸಿದೆೆ. ಶಿವಮೊಗ್ಗ ಜಿಲ್ಲಾಧಿಕಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಶನಿವಾರದಿಂದ ಎರಡೂ ಕಡೆಗಳಿಂದ ಬಸ್‌ ಸಂಚಾರಕ್ಕೆ ಅವಕಾಶ ನೀಡಲಾಗುತ್ತದೆ. ಆದರೆ ಘನವಾಹನಗಳಿಗೆ ಸಂಚಾರ ನಿರ್ಬಂಧವಿರಲಿದೆ ಎಂದು ಉಡುಪಿ ಡಿಸಿ ಹೇಳಿದ್ದಾರೆ.

ಬದಲಿ ಮಾರ್ಗ
ಆಗುಂಬೆ ಘಾಟಿ ಬಸ್‌ ಸಂಚಾರ ಸ್ಥಗಿತಗೊಂಡ ಕಾರಣ ಉಡುಪಿ ಯಿಂದ ಶಿವಮೊಗ್ಗ, ಚಿಕ್ಕಮಗಳೂರು ಕಡೆಗೆ ಹೋಗುವ ಬಸ್‌ಗಳು ಬಾಳೆಬರೆ ಘಾಟಿ, ಹಾಗೂ ಬಜ ಗೋಳಿ ಮೂಲಕ ಕೆರೆಕೆಟ್ಟೆ ಘಾಟಿ ಮಾರ್ಗದಲ್ಲಿ ಸಂಚರಿಸಿದವು.

Advertisement

ಸಂಸದೆ ಸೂಚನೆ
ಆಗುಂಬೆ ಘಾಟಿಯ ಭೂಕುಸಿತ ವನ್ನು ಶೀಘ್ರ ತೆರವು ಮಾಡಲು ಶೋಭಾ ಕರಂದ್ಲಾಜೆ ರಾಷ್ಟ್ರೀಯ ಹೆದ್ದಾರಿ ಇಲಾಖೆಗೆ ಸೂಚಿಸಿದ್ದಾರೆ.

ನಿತ್ಯ ಪ್ರಯಾಣಿಕರಿಗೆ ತೊಂದರೆ
ಮಲೆನಾಡು – ಕರಾವಳಿ ಸಂಪರ್ಕ ಕಲ್ಪಿಸುವ ಪ್ರಮುಖ ಕೊಂಡಿಯಾದ ಆಗುಂಬೆ ಘಾಟಿ ರಸ್ತೆ ಕುಸಿದ ಕಾರಣ ಈ ಮಾರ್ಗದಲ್ಲಿ ಬಸ್‌ಗಳಲ್ಲಿ ನಿತ್ಯ ಸಂಚರಿಸುವ ಉದ್ಯೋಗಿಗಳಿಗೆ ಹಾಗೂ ತುರ್ತು ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ಬರುವ ರೋಗಿಗಳಿಗೆ ತೊಂದರೆಯಾಯಿತು.

Advertisement

Udayavani is now on Telegram. Click here to join our channel and stay updated with the latest news.

Next