Advertisement

ದಿಲ್ಲಿಯಲ್ಲಿ ಮತ್ತೂಮ್ಮೆ ಗದ್ದುಗೆ ಏರಲು ಪ್ರಶಾಂತ್‌ ನೆರವು ಪಡೆದ ಕೇಜ್ರಿವಾಲ್‌

11:33 AM Dec 15, 2019 | Team Udayavani |

ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದು, ಮತ್ತೂಮ್ಮೆ ರಾಷ್ಟ್ರರಾಜಧಾನಿಯಲ್ಲಿ ಗದ್ದುಗೆ ಏರಲು ಆಮ್‌ ಆದ್ಮಿ ಪಾರ್ಟಿ ನೇತಾರ, ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌, ರಾಜಕೀಯ ಕಾರ್ಯತಂತ್ರಗಾರ ಪ್ರಶಾಂತ್‌ ಕಿಶೋರ್‌ ನೆರವು ಪಡೆಯುತ್ತಿದ್ದಾರೆ. ಈ ಕುರಿತು ಕೇಜ್ರಿವಾಲ್‌ ಟ್ವೀಟ್‌ ಮಾಡಿದ್ದು, ಪ್ರಶಾಂತ್‌ ಕಿಶೋರ್‌ ನೇತೃತ್ವದ ಭಾರತೀಯ ರಾಜಕೀಯ ಕ್ರಿಯಾ ಸಮಿತಿ(ಐ-ಪ್ಯಾಕ್‌ ) ಮುಂದಿನ ಚುನಾವಣೆಯಲ್ಲಿ ನಮ್ಮ ಜೊತೆ ಕೆಲಸ ಮಾಡಲಿದೆ.. ಇದನ್ನು ಹಂಚಿಕೊಳ್ಳುತ್ತಿರುವುದಕ್ಕೆ ಖುಷಿಯಾಗಿದೆ ಎಂದಿದ್ದಾರೆ.

Advertisement

ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್‌ ವರಿಷ್ಠೆ ಮಮತಾ ಬ್ಯಾನರ್ಜಿ ಕೂಡ ಪ್ರಶಾಂತ್‌ ನೆರವು ಪಡೆಯುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next