Advertisement

Politics: ಅಹಿಂದ- ಸಿದ್ದು, ಹರಿಪ್ರಸಾದ್‌ ಶಕ್ತಿ ಪ್ರದರ್ಶನ?

12:00 AM Dec 18, 2023 | Team Udayavani |

ಬೆಂಗಳೂರು: ಇತ್ತೀಚೆಗೆ ಪ್ರದೇಶ ಆರ್ಯ ಈಡಿಗ ಸಂಘದಿಂದ ನಡೆದ ಈಡಿಗ ಸ್ವಾಭಿಮಾನಿ ಸಮಾವೇಶಕ್ಕೆ ಪ್ರತಿಯಾಗಿ ಜನವರಿಯಲ್ಲಿ ಕಾಂಗ್ರೆಸ್‌ನ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್‌ ಬೃಹತ್‌ ಹಿಂದುಳಿದ ಸಮಾವೇಶಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ.

Advertisement

ಇದರ ನಡುವೆಯೇ ಸಿದ್ದರಾಮೋತ್ಸವ ಮಾದರಿಯಲ್ಲಿ ಅಹಿಂದ ಸಮಾವೇಶಕ್ಕೆ ಸಿದ್ದರಾಮಯ್ಯ ಬೆಂಬಲಿಗರು ಮುಂದಾಗಿದ್ದಾರೆ. ಇದೇ ಡಿಸೆಂಬರ್‌ ಕೊನೆಗೆ ಚಿತ್ರದುರ್ಗದಲ್ಲಿ ಮತ್ತೂಮ್ಮೆ ಅಹಿಂದ ಸಮಾವೇಶ ನಡೆಸಲು ಸಿದ್ದರಾಮಯ್ಯ ಬೆಂಬಲಿಗರು ಉದ್ದೇಶಿಸಿದ್ದು, ಸುಮಾರು ಹತ್ತು ಲಕ್ಷ ಜನರನ್ನು ಸೇರಿಸಲು ಶ್ರಮಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮುಖ್ಯವಾಗಿ ಜಾತಿ ಜನಗಣತಿ ವರದಿ ಸ್ವೀಕರಿಸಿ, ಜಾರಿಗೊಳಿಸುವಂತೆ ಒತ್ತಾಯಿಸಿ ಅಹಿಂದ ಸಮಾವೇಶ ನಡೆಯಲಿದೆ. ಜತೆಗೆ ಕಾಂಗ್ರೆಸ್‌ ಆಂತರಿಕ ಒಪ್ಪಂದದ ಪ್ರಕಾರ ಅಧಿಕಾರ ಹಂಚಿಕೆ ಸೂತ್ರ ರೂಪಿಸಿಕೊಳ್ಳಲಾಗಿದೆ. ಲೋಕಸಭಾ ಚುನಾವಣೆ ಬಳಿಕ ಅಧಿಕಾರ ಹಂಚಿಕೆ ಸೂತ್ರಕ್ಕೆ ಮರುಜೀವ ಬಂದರೂ ಬರಬಹುದು. ಇದನ್ನು ಮನಗಂಡು ಈಗಿನಿಂದಲೇ ಅದಕ್ಕೆ ಸಮಾವೇಶದ ಮೂಲಕ ತಂತ್ರ ಹೆಣೆಯಲಾಗುತ್ತಿದೆ ಎನ್ನಲಾಗುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next