Advertisement

ರಸ್ತೆ ಅಪಘಾತದಲ್ಲಿ AIADMK ಸಂಸದ ರಾಜೇಂದ್ರನ್ ಮೃತ್ಯು

04:19 AM Feb 23, 2019 | Team Udayavani |

ಚೆನ್ನೈ: ಎ.ಐ.ಎ.ಡಿ.ಎಂ.ಕೆ. ಪಕ್ಷದ ನಾಯಕ ಹಾಗೂ ವಿಲ್ಲುಪುರಂ ಕ್ಷೇತ್ರದ ಸಂಸದ ಎಸ್. ರಾಜೇಂದ್ರನ್ ಅವರು ತಮಿಳುನಾಡಿನ ವಿಲ್ಲುಪುರಂ ಜಿಲ್ಲೆಯ ಟಿಂಡಿವಣಂ ಎಂಬಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. 62 ವರ್ಷ ಪ್ರಾಯದ ರಾಜೇಂದ್ರನ್ ಅವರು ಪಿ.ಎಂ.ಕೆ. ಪಕ್ಷದ ರಾಮ್ ದಾಸ್ ಅವರು ತೈಲಪುರಂನಲ್ಲಿ ಏರ್ಪಡಿಸಿದ್ದ ಔತಣಕೂಟವೊಂದರಲ್ಲಿ ಭಾಗವಹಿಸಿ ತನ್ನ ಮನೆಗೆ ಹಿಂತಿರುಗುತ್ತಿದ್ದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.

Advertisement

ಶನಿವಾರ ನಸುಕಿನ 4.35ರ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು, ಸಂಸದ ರಾಜೆಂದ್ರನ್ ಅವರು ಪ್ರಯಾಣಿಸುತ್ತಿದ್ದ ಕಾರು ರಸ್ತೆ ವಿಭಾಜಕಕ್ಕೆ ಢಿಕ್ಕಿ ಹೊಡೆದು ಅಪಘಾತ ಸಂಭವಿಸಿರುವುದಾಗಿ ಪ್ರಾಥಮಿಕ ಮೂಲಗಳಿಂದ ತಿಳಿದುಬಂದಿದೆ. ಅಪಘಾತವಾದ ತಕ್ಷಣ ಸ್ಥಳೀಯರು ಕಾರಿನಲ್ಲಿದ್ದ ಎಲ್ಲಾ ನಾಲ್ವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದರು. ಆದರೆ ಈ ವೇಳೆಗಾಗಲೇ ಸಂಸದ ರಾಜೇಂದ್ರನ್ ಅವರು ಮೃತಪಟ್ಟಿದ್ದರು. ಉಳಿದ ಮೂವರು ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

2014ರ ಲೋಕಸಭಾ ಚುನಾವಣೆಯಲ್ಲಿ ವಿಲ್ಲುಪುರಂ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದ ರಾಜೇಂದ್ರನ್ ಅವರು ರಾಸಾಯನಿಕ ಮತ್ತು ರಸಗೊಬ್ಬರ ಸಂಸದೀಯ ಸ್ಥಾಯೀ ಸಮಿತಿಯಲ್ಲಿ ಮತ್ತು ನಾಗರಿಕ ವಿಮಾನಯಾನ ಸಚಿವಾಲಯದ ಸಲಹಾ ಸಮಿತಿಯಲ್ಲಿ ಸದಸ್ಯರಾಗಿದ್ದರು.
 

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next