Advertisement

ಚೆನ್ನೈ ಜೈಲಿಗೆ ವರ್ಗಾಯಿಸಿ; ಜೈಲು ಅಧಿಕಾರಿಗಳಿಗೆ ಶಶಿಕಲಾ ಮನವಿ

03:42 PM Feb 20, 2017 | Sharanya Alva |

ಬೆಂಗಳೂರು/ ಚೆನ್ನೈ:ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಜೈಲುಶಿಕ್ಷೆಗೊಳಗಾಗಿರುವ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ವಿಕೆ ಶಶಿಕಲಾ ನಟರಾಜನ್, ತನ್ನನ್ನು ಚೆನ್ನೈನ ಕೇಂದ್ರ ಕಾರಾಗೃಹಕ್ಕೆ ವರ್ಗಾಯಿಸುವಂತೆ ಪರಪ್ಪನ ಅಗ್ರಹಾರ ಜೈಲು ಅಧಿಕಾರಿಗಳಿಗೆ ಪತ್ರ ಬರೆದಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.

Advertisement

ಫೆ.15ರಿಂದ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಶಶಿಕಲಾ, ಸೋಮವಾರ ವಕೀಲರ ಜೊತೆ ಚರ್ಚಿಸಿ ತನ್ನನ್ನು ಚೆನ್ನೈನ ಜೈಲಿಗೆ ವರ್ಗಾಯಿಸುವಂತೆ ಕೋರಿ ಜೈಲು ಅಧಿಕಾರಿಗಳಿಗೆ ಮನವಿ ಸಲ್ಲಿಸಿರುವುದಾಗಿ ವರದಿ ಹೇಳಿದೆ.

ಶಶಿಕಲಾ ನಟರಾಜನ್ ಮನವಿ ತಮ್ಮ ಕೈ ತಲುಪಿರುವುದಾಗಿ ಪರಪ್ಪನ ಅಗ್ರಹಾರದ ಜೈಲಿನ ಅಧಿಕಾರಿಗಳು ತಿಳಿಸಿದ್ದು, ಈ ಬಗ್ಗೆ ಚೆನ್ನೈನ ಜೈಲು ಅಧಿಕಾರಿಗಳು ಪತ್ರ ಬರೆಯಲು ನಿರ್ಧರಿಸಿರುವುದಾಗಿ ಮೂಲಗಳು ತಿಳಿಸಿವೆ.

ಶಶಿಕಲಾ ಪರಪ್ಪನ ಅಗ್ರಹಾರ ಜೈಲಿನಿಂದ ವರ್ಗಾವಣೆ ಆಗುವ ಬಗ್ಗೆ ಚೆನ್ನೈನ ಕೇಂದ್ರ ಕಾರಾಗೃಹದ ಅಧಿಕಾರಿಗಳು ನಿರ್ಧಾರ ಕೈಗೊಳ್ಳಬೇಕಾಗಿದೆ ಎಂದು ವರದಿ ವಿವರಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next