Advertisement

ದೆಹಲಿಯಲ್ಲಿಂದು ಎಐಸಿಸಿ ಕಾರ್ಯಕಾರಿಣಿ

06:50 AM Aug 04, 2018 | Team Udayavani |

ಬೆಂಗಳೂರು: ಲೋಕಸಭೆಗೆ ಅವಧಿಗೂ ಮುನ್ನ ಚುನಾವಣೆ ನಡೆಯಲಿದೆ ಎಂಬ ಮಾತುಗಳ ಬೆನ್ನಲ್ಲೇ ದೆಹಲಿಯಲ್ಲಿ ಶನಿವಾರ ಎರಡನೇ ಎಐಸಿಸಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯಲಿದೆ.

Advertisement

ಎಐಸಿಸಿ ಅಧ್ಯಕ್ಷ ರಾಹುಲ್‌ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ಸಮನ್ವಯ ಸಮಿತಿ ಅಧ್ಯಕ್ಷರೂ ಆಗಿರುವ ಸಿದ್ದರಾಮಯ್ಯ, ಕಾಂಗ್ರೆಸ್‌ ಸಂಸದೀಯ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ದಿನೇಶ್‌ಗುಂಡುರಾವ್‌ ಸಹ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಲಿದ್ದಾರೆ.ಲೋಕಸಭೆ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುವುದು, ಸಮಾನ ಮನಸ್ಕ ಪಕ್ಷಗಳ ಜತೆ ಮೈತ್ರಿ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿದೆ ಎಂದು ಹೇಳಲಾಗಿದೆ.

ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಳ್ಳುವ ಸಲುವಾಗಿ ಸಿದ್ದರಾಮಯ್ಯ ಅವರು ಶುಕ್ರವಾರ ರಾತ್ರಿ ದೆಹಲಿಗೆ ತೆರಳಿದರು. ಕಾರ್ಯಕಾರಿಣಿ ಸಭೆಗೆ ಮುನ್ನ ಗುಲಾಂ ನಬಿ ಆಜಾದ್‌ ಹಾಗೂ ಅಹಮದ್‌ ಪಟೇಲ್‌ ಅವರನ್ನು  ಭೇಟಿ ಮಾಡಿ ಚರ್ಚಿಸಲಿದ್ದಾರೆ ಎಂದು ಹೇಳಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next