Advertisement

ಮಲ್ಲಿಕಾರ್ಜುನ ಖರ್ಗೆ ಸೋಲಿಸುವುದೇ ಗುರಿ 

01:26 AM Mar 17, 2019 | Team Udayavani |

ಬಳ್ಳಾರಿ: ಪರಿಶಿಷ್ಟ ಜಾತಿಯಲ್ಲಿನ ಒಳಪಂಗಡಗಳಿಗೆ ಒಳಮೀಸಲಾತಿ ಕಲ್ಪಿಸುವ ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿಗೆ ವಿರೋಧ ವ್ಯಕ್ತಪಡಿಸುತ್ತಿರುವ ಸಂಸದ ಮಲ್ಲಿಕಾರ್ಜುನ ಖರ್ಗೆ ಸೇರಿ ಇತರ ಮುಖಂಡರನ್ನು ಈ ಬಾರಿಯ ಚುನಾವಣೆಯಲ್ಲಿ ಸೋಲಿಸಲು ನಿರ್ಣಯ ಕೈಗೊಳ್ಳಲಾಗಿದೆ ಎಂದು ಮಾದಿಗ ಮೀಸಲಾತಿ ಹೋರಾಟ ಸಮಿತಿ ರಾಜ್ಯಾಧ್ಯಕ್ಷ ಎಚ್‌.ಹನುಮಂತಪ್ಪ ತಿಳಿಸಿದರು.

Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ದಲಿತ ಸಮುದಾಯದರಾಜಕಾರಣಿಗಳು ಮೊದಲಿನಿಂದಲೂ ಸದಾಶಿವ ಆಯೋಗದ ವರದಿಯನ್ನು ಶಿಫಾರಸು ಮಾಡಬಾರದೆಂಬ ಕುತಂತ್ರ ರಾಜಕಾರಣ ಮಾಡುತ್ತಾ ಬಂದಿದ್ದಾರೆ. ಹಾಗಾಗಿ, ಕಲಬುರಗಿ ಕೇÒತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋಲಿಸುವುದೇ ನಮ್ಮ ಪರಮ ಗುರಿಯಾಗಿದೆ. ಅಲ್ಲದೆ, ಆಯೋಗದ ವರದಿಗೆ ಅಡ್ಡಿಪಡಿಸುತ್ತಿದ್ದಾರೆ ಎನ್ನಲಾದ ಡಾ| ಜಿ.ಪರಮೇಶ್ವರ್‌, ಮಾಜಿ ಸಚಿವರಾದ ನರೇಂದ್ರಸ್ವಾಮಿ, ಎಚ್‌.ಸಿ.ಮಹಾದೇವಪ್ಪ, ಶಿವರಾಜ್‌ ತಂಗಡಗಿ, ಮಾನಪ್ಪ ವಜ್ಜಲ್‌, ಸಚಿವ ಪಿ.ಟಿ.ಪರಮೇಶ್ವರ ನಾಯ್ಕ, ಶಾಸಕ ರಾಜುಕುಡಚಿ ಸೇರಿ ಇನ್ನಿತರರಿಗೂ ಸರಿಯಾದ ಪಾಠ ಕಲಿಸಲು ಸ್ಪಷ್ಟ ನಿರ್ಧಾರ ಕೈಗೊಳ್ಳಲಾಗಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next