Advertisement

ಜ್ಞಾನವಾಪಿ ತೀರ್ಪು ದೇಶದಲ್ಲಿ ಸಮಸ್ಯೆಗಳನ್ನು ಸೃಷ್ಟಿಸುತ್ತದೆ : ಓವೈಸಿ ಎಚ್ಚರಿಕೆ

07:25 PM Sep 12, 2022 | Team Udayavani |

ವಾರಾಣಸಿ : ಜ್ಞಾನವಾಪಿ ಮಸೀದಿ ಪ್ರಕರಣದಲ್ಲಿ ವಾರಾಣಸಿ ಜಿಲ್ಲಾ ನ್ಯಾಯಾಲಯದ ಆದೇಶವು ಅಸ್ಥಿರಗೊಳಿಸುವ ಪರಿಣಾಮವನ್ನು ಬೀರುತ್ತದೆ ಮತ್ತು ದೇಶದಲ್ಲಿ ಸಮಸ್ಯೆಗಳನ್ನು ಸೃಷ್ಟಿಸುತ್ತದೆ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಎಚ್ಚರಿಸಿದ್ದಾರೆ.

Advertisement

ಹೈದರಾಬಾದ್ ಸಂಸದರು ವಾರಣಾಸಿ ನ್ಯಾಯಾಲಯದ ಆದೇಶವನ್ನು ಬಾಬರಿ ಮಸೀದಿ ಪ್ರಕರಣದಲ್ಲಿ ಹಿಂದಿನ ಸುಪ್ರೀಂ ಕೋರ್ಟ್ ತೀರ್ಪಿನೊಂದಿಗೆ ಹೋಲಿಸಿದ್ದಾರೆ.ಇದರ ನಂತರ ಅಸ್ಥಿರಗೊಳಿಸುವ ಪರಿಣಾಮವು ಪ್ರಾರಂಭವಾಗುತ್ತದೆ. ಬಾಬರಿ ಮಸೀದಿ ವಿಚಾರವಾಗಿ ನಾವು ಅದೇ ಹಾದಿಯಲ್ಲಿ ಸಾಗುತ್ತಿದ್ದೇವೆ. ಬಾಬರಿ ಮಸೀದಿಯ ತೀರ್ಪು ಬಂದಾಗ, ನಂಬಿಕೆಯ ಆಧಾರದ ಮೇಲೆ ಈ ತೀರ್ಪು ನೀಡಿದ್ದರಿಂದ ದೇಶದಲ್ಲಿ ಸಮಸ್ಯೆಗಳು ಉಂಟಾಗುತ್ತವೆ ಎಂದು ನಾನು ಎಲ್ಲರಿಗೂ ಎಚ್ಚರಿಕೆ ನೀಡಿದ್ದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ : ಜ್ಞಾನವಾಪಿ-ಶೃಂಗಾರ ಗೌರಿ ಪ್ರಕರಣ: ಹಿಂದೂಗಳ ಅರ್ಜಿ ಪುರಸ್ಕರಿಸಿದ ವಾರಾಣಸಿ ಕೋರ್ಟ್

ಈ ಆದೇಶದ ವಿರುದ್ಧ ಅಂಜುಮನ್ ಇಂತೇಜಾಮಿಯಾ ಮಸೀದಿ ಸಮಿತಿ ಮೇಲ್ಮನವಿ ಸಲ್ಲಿಸಲಿದೆ ಎಂದು ಅಸಾದುದ್ದೀನ್ ಓವೈಸಿ ಆಶಿಸಿದ್ದಾರೆ. “ಈ ಆದೇಶದ ನಂತರ, ಪೂಜಾ ಸ್ಥಳಗಳ ಕಾಯಿದೆ 1991 ರ ಉದ್ದೇಶವು ವಿಫಲಗೊಳ್ಳುತ್ತದೆ ಎಂದು ನಾನು ನಂಬುತ್ತೇನೆ” ಎಂದು ಓವೈಸಿ ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next