Advertisement

ಬಯಲು ಶೌಚಮುಕ್ತ ಜಿಲ್ಲೆ ನಿರ್ಮಾಣ ಗುರಿ: ಸಚಿವ ಖಂಡ್ರೆ

10:46 AM Oct 03, 2017 | Team Udayavani |

ಬೀದರ: ಬೀದರನ್ನು ಬಯಲು ಶೌಚ ಮುಕ್ತ ಜಿಲ್ಲೆಯನ್ನಾಗಿಸಬೇಕು. ನಿಟ್ಟಿನಲ್ಲಿ ಸ್ವತ್ಛತಾ ಅಭಿಯಾನವು ಆಂದೋಲನ ಸ್ವರೂಪ ಪಡೆಯಬೇಕು. ಜಿಲ್ಲಾದ್ಯಂತ ಪ್ರತಿಯೊಂದು ಮನೆ ಶೌಚಾಲಯ ಹೊಂದುವ ಕಾರ್ಯ ಯುದೊಪಾದಿ ರೀತಿಯಲ್ಲಿ ನಡೆಯಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಕರೆ ನೀಡಿದರು.

Advertisement

ಭಾಲ್ಕಿ ತಾಲೂಕಿನ ಅಟ್ಟರ್ಗಾ ಗ್ರಾಮದಲ್ಲಿ ನಡೆದ “ನಮ್ಮ ನಡಿಗೆ ಸ್ವತ್ಛ ಗ್ರಾಮದ ಕಡೆಗೆ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಅಟ್ಟರ್ಗಾ ಗ್ರಾಮ ಸ್ವಾತಂತ್ರ್ಯ ಸೇನಾನಿಗಳ ನಾಡಾಗಿದೆ.

ಸ್ವಾತಂತ್ರ್ಯೋತ್ಸವ ಚಳವಳಿಯಲ್ಲಿ ಈ ಊರಿನ ಕೊಡುಗೆ ಹಿರಿದು ಎನ್ನವುದು ಇಡೀ ಜಿಲ್ಲೆಗೆ ಹೆಮ್ಮಯ ಸಂಗತಿ. ಗ್ರಾಮದ ಪ್ರತಿಯೊಂದು ಕುಟುಂಬಗಳು ಶೌಚಾಲಯ ಕಟ್ಟಿಸಿಕೊಂಡು ಸ್ವತ್ಛತೆಗೆ ಒತ್ತು ನೀಡಿದ್ದು, ಬಯಲು ಬಹಿರ್ದೆಸೆ ಮುಕ್ತ ಗ್ರಾಮ ಎಂದು ಹೆಸರಾಗುತ್ತಿರುವುದು ನಿಜಕ್ಕೂ ಶ್ಲಾಘನೀಯ ಸಂಗತಿ ಎಂದರು.

ಶೌಚಾಲಯ ಹೊಂದುವುದು ಸ್ವಾಭಿಮಾನದ, ಗೌರವದ ಸಂಕೇತವಾಗಿದೆ ಎಂಬುದನ್ನು ಪ್ರತಿಯೊಬ್ಬರು ಅರಿಯಬೇಕು. ಬಯಲಿಗೆ ನಡೆಯುವ ಅಂಧಶ್ರದ್ಧೆಯಿಂದ ಹೊರಬರಬೇಕು. ನಾವು ಇಂದಿನಿಂದಲೇ ಶೌಚಾಲಯ ಕಟ್ಟಿಸಿಕೊಳ್ಳಲು ಮುಂದಾಗುತ್ತೇವೆ ಎನ್ನುವ ಸಂಕಲ್ಪ ಹೊಂದಬೇಕು.

ನಿರ್ಮಲ ಭಾರತ ನಿರ್ಮಲ ಬೀದರ ಅಭಿಯಾನವು ಜಿಲ್ಲೆಯಾದ್ಯಂತ ಯಶಸ್ವಿಯಾಗಲು ಅಧಿಕಾರಿಗಳೊಂದಿಗೆ ಜನತೆ ಕೈಜೋಡಿಸಬೇಕು ಎಂದು ಹೇಳಿದರು.

Advertisement

ಗ್ರಾಮಗಳು ಅಭಿವೃದ್ಧಿಯಾಗದ ಹೊರತು ದೇಶ ಅಭಿವೃದ್ಧಿಯಾಗುವುದಿಲ್ಲ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಗ್ರಾಮಾಭಿವೃದ್ಧಿಗೆ, ಮಹಿಳಾ ಸಬಲೀಕರಣಕ್ಕೆ ಒತ್ತು ನೀಡಿದೆ. ಸ್ಥಳೀಯ ಸಂಸ್ಥೆಗಳಲ್ಲಿ ಇಂದು ಮಹಿಳೆಯರೆ ಅಧ್ಯಕ್ಷರಾಗಿ, ಸದಸ್ಯರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದು ದೇಶ ಅಭಿವೃದ್ಧಿ ಪಥದತ್ತ ಸಾಗುತ್ತಿದೆ ಎಂಬುದನ್ನು ತಿಳಿಸುತ್ತದೆ ಎಂದರು.

ಭಾಲ್ಕಿ ಸೇರಿದಂತೆ ಜಿಲ್ಲೆಯ ಎಲ್ಲಾ ಕಡೆಗಳಲ್ಲಿ ರಸ್ತೆ ಸುಧಾರಣೆಗೆ ಒತ್ತು ನೀಡಲಾಗಿದೆ. ಈ ನಿಟ್ಟಿನಲ್ಲಿ ನಮ್ಮ ಹೊಲ ನಮ್ಮ ದಾರಿ ಯೋಜನೆಯಡಿ ಜಿಲ್ಲೆಯ ಜನರು ಪ್ರಸ್ತಾವನೆ ಸಲ್ಲಿಸಿದಲ್ಲಿ ರಸ್ತೆಗಳ ದುರಸ್ತಿ, ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾ ಗುವುದು. ಕೃಷಿ ಹೊಂಡ ನಿರ್ಮಿಸಲು ಕೋರಿ ಅರ್ಜಿ ಸಲ್ಲಿಸಿ ಕೃಷಿಭಾಗ್ಯ ಯೋಜನೆಯ ಸದುಪಯೋಗ ಪಡೆಯಬೇಕು ಎಂದು ಸಚಿವರು ಹೇಳಿದರು.

ಜಿಪಂ ಅಧ್ಯಕ್ಷೆ ಭಾರತಬಾಯಿ ಶೇರಿಕಾರ, ಜಿಪಂ ಉಪಾಧ್ಯಕ್ಷ ಡಾ| ಪ್ರಕಾಶ ಪಾಟೀಲ, ತಾಪಂ ಅಧ್ಯಕ್ಷೆ ರೇಖಾ ಪಾಟೀಲ, ಉಪಾಧ್ಯಕ್ಷ ಮಾರುತಿರಾವ್‌, ಅಟ್ಟರ್ಗಾ ಗ್ರಾಪಂ ಅಧ್ಯಕ್ಷೆ ಗಂಗೂಬಾಯಿ ದಿಗಂಬರ್‌, ಉಪಾಧ್ಯಕ್ಷೆ ಪ್ರಭಾವತಿ, ಜಿಪಂ ಸದಸ್ಯ ವಿದ್ಯಾಸಾಗರ ಶಿಂಧೆ, ಜಿಲ್ಲಾಧಿಕಾರಿ ಡಾ| ಎಚ್‌.ಆರ್‌. ಮಹಾದೇವ, ಜಿಪಂ ಸಿಇಒ ಡಾ| ಸೆಲ್ವಮಣಿ ಆರ್‌., ಸ್ವತ್ಛ ಭಾರತ ಅಭಿಯಾನದ ನೋಡೆಲ್‌ ಅಧಿಕಾರಿ ಗೌತಮ ಅರಳಿ, ಪಿಡಿಒ ಬಲಭೀಮ ಪವಾರ ಸೇರಿದಂತೆ ಗ್ರಾಪಂ ಸದಸ್ಯರು, ಅಧಿಕಾರಿಗಳು, ಗುಂಜರರ್ಗಾ ಹಾಗೂ ಮಾಣಿಕೇಶ್ವರ ಗ್ರಾಮಸ್ಥರು ಇದ್ದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಗ್ರಾಮ ಪಂಚಾಯತ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಹಾಗೂ ಸ್ವತ್ಛ ಭಾರತ ಮಿಷನ್‌ ಸಂಯುಕ್ತಾಶ್ರಯದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next