Advertisement
ತಾಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪುಸ್ತಕ ಸಂಗ್ರಹ ಮಾಸಿಕ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ವಿನೂತನ ಕಾರ್ಯಕ್ರಮವು ಜಿಲ್ಲಾಡಳಿತದ ಹೊಸ ಪ್ರಯತ್ನವಾಗಿದ್ದು, ಪುಸ್ತಕ ಸಂಗ್ರಹ ಅಭಿಯಾನವಾಗಿದೆ. ಜೂನ್ 25ರವರೆಗೆ ಪುಸ್ತಕ ಸಂಗ್ರಹ ಅಭಿಯಾನ ನಡೆಯಲಿದೆ. ಸರ್ಕಾರಿ ಶಾಲೆಗಳಲ್ಲಿನ ವಿದ್ಯಾರ್ಥಿಗಳ ಜ್ಞಾನವನ್ನು ಹೆಚ್ಚಿಸಲು, ಈ ಅಭಿಯಾನದಿಂದ ಸಂಗ್ರಹಿಸಿದ ಪುಸ್ತಕಗಳನ್ನು ಸರ್ಕಾರಿ ಶಾಲೆಗಳಿಗೆ ದಾನ ಮಾಡಲಾಗುತ್ತದೆ ಎಂದರು.
Related Articles
Advertisement
ಜಿಲ್ಲಾಧಿಕಾರಿ ವಿದ್ಯಾರ್ಥಿಗಳಲ್ಲಿ ಓದುವ ಹವ್ಯಾಸ ಬೆಳೆಸಲು ಇದು ಸಹಕಾರಿಯಾಗಲಿದೆ. ಒಂದು ತಿಂಗಳು ಅಭಿಯಾನ ನಡೆಯಲಿದ್ದು 5 ಸಾವಿರ ಪುಸ್ತಕಗಳನ್ನು ಸಂಗ್ರಹಿಸುವ ಗುರಿಯನ್ನು ಹೊಂದಿದ್ದೇವೆ. ವಿದ್ಯಾರ್ಥಿಗಳಿಗೆ ಅನುಕೂಲವಾಗುವ ಪಠ್ಯಪುಸ್ತಕಗಳು, ನೀತಿ ಕತೆ, ಕಾದಂಬರಿ, ಆತ್ಮಕಥನ, ವಿಜ್ಞಾನ ವಿಷಯ ಹಾಗೂ ಇನ್ನಿತರ ಕ್ಷೇತ್ರಗಳಿಗೆ ಸಂಬಂಧಿಸಿಂತೆ ಓದಲು ಉತ್ತಮ ಸ್ಥಿತಿಯಲ್ಲಿರುವ ಹಳೆಯ ಮತ್ತು ಹೊಸ ಪುಸ್ತಕಗಳನ್ನು ಸಾರ್ವಜನಿಕರು ದಾನ ಮಾಡಬಹುದು ಎಂದು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಹೇಳಿದರು.