Advertisement

ಡಿ.5ರಿಂದ ವಾಯುಸೇನಾ ನೇಮಕಾತಿ ರ್ಯಾಲಿ

11:36 AM Sep 26, 2018 | |

ಮೈಸೂರು: ನಗರದ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಡಿಸೆಂಬರ್‌ 5ರಿಂದ 11ರವರೆಗೆ ವಾಯು ಸೇನಾ ನೇಮಕಾತಿ ರ್ಯಾಲಿ ಹಮ್ಮಿಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಅಭಿರಾಮ್‌ ಜಿ.ಶಂಕರ್‌ ತಿಳಿಸಿದರು.

Advertisement

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಪೂರ್ವಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದ ಅಭ್ಯರ್ಥಿಗಳನ್ನು ವಾಯುಸೇನೆಗೆ ಆಯ್ಕೆ ಮಾಡಿಕೊಳ್ಳಲು ರ್ಯಾಲಿ ನಡೆಸಲಾಗುವುದು. ರ್ಯಾಲಿ ಆಯೋಜಿಸಲು ಬೇಕಿರುವ ಅಗತ್ಯ ಸಿದ್ಧತೆ ಮಾಡಿಕೊಳ್ಳಲು ವಾಯುಸೇನಾ ಅಧಿಕಾರಿಗಳೊಂದಿಗೆ ಸಮನ್ವಯತೆ ವಹಿಸುವಂತೆ ಸೈನಿಕ ಕಲ್ಯಾಣ ಇಲಾಖೆಯ ಉಪನಿರ್ದೇಶಕರಿಗೆ ತಿಳಿಸಿದರು.

ರ್ಯಾಲಿ ಆಯೋಜಿಸಲು ವಾಯುಸೇನಾ ಅಧಿಕಾರಿಗಳು ಹಾಗೂ ಸಿಬ್ಬಂದಿ ಸೇರಿದಂತೆ ಅಂದಾಜು 75 ಜನರು ಡಿಸೆಂಬರ್‌ 3ರಿಂದ 11ರವರೆಗೆ ಮೈಸೂರಿನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಇವರ ವಾಸ್ತವ್ಯಕ್ಕೆ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ತಿಳಿಸಿದರು.

ಡಿ.5ರಂದು 9 ಜಿಲ್ಲೆಗಳ ಅಭ್ಯರ್ಥಿಗಳು ಹಾಗೂ ಡಿ.7ರಂದು ಉಳಿದ ಜಿಲ್ಲೆಗಳ ಅಭ್ಯರ್ಥಿಗಳು ದೈಹಿಕ ಪರೀಕ್ಷೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಎರಡು ದಿನಗಳು ಆರೋಗ್ಯ ಇಲಾಖೆಯಿಂದ ಒಂದು ಅಂಬ್ಯುಲೆನ್ಸ್‌ ಹಾಗೂ ತುರ್ತು ಸಂದರ್ಭದಲ್ಲಿ ಬೇಕಿರುವ ಔಷಧೋಪಚಾರಗಳ ವ್ಯವಸ್ಥೆ ಮಾಡಿಕೊಡುವಂತೆ ತಿಳಿಸಿದರು.

ನೇಮಕಾತಿ ರ್ಯಾಲಿಯಲ್ಲಿ ಭಾಗವಹಿಸಲು ಅಭ್ಯರ್ಥಿಗಳು ಮೈಸೂರಿಗೆ ಹಿಂದಿನ ದಿನವೇ ಆಗಮಿಸುವ ಸಾಧ್ಯತೆಗಳು ಇರುತ್ತದೆ. ಅವರ ವಾಸ್ತವ್ಯಕ್ಕಾಗಿ ಶಿಕ್ಷಕರ ಭವನ  ಅಥವಾ ನಂಜರಾಜ ಬಹದ್ದೂರ್‌ ಛತ್ರದಲ್ಲಿ ವ್ಯವಸ್ಥೆ ಮಾಡುವಂತೆ ತಿಳಿಸಿದರು.

Advertisement

ರ್ಯಾಲಿಗೆ ಅಂದಾಜು 1000-1200 ಅಭ್ಯರ್ಥಿಗಳು ಭಾಗವಹಿಸಬಹುದು ಅವರಿಗೆ ಬೇಕಿರುವ ಕುಡಿಯುವ ನೀರು, ಶೌಚಾಲಯಗಳ ವ್ಯವಸ್ಥೆಯನ್ನು ಮೈಸೂರು ಮಹಾನಗರಪಾಲಿಕೆ ವತಿಯಿಂದ, ಬ್ಯಾರಿಕೇಡಿಂಗ್‌ ಹಾಗೂ ರಕ್ಷಣಾ ವ್ಯವಸ್ಥೆಯನ್ನು ಪೊಲೀಸ್‌ ಇಲಾಖೆಯಿಂದ ಕಲ್ಪಿಸುವಂತೆ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next