Advertisement

ಕಲ್ಲಿಕೋಟೆ ದುರಂತ: ಮಂಗಳೂರು ವಿಮಾನ ದುರಂತದಷ್ಟೇ ತೀವ್ರವಾದ ಘಟನೆ

10:44 PM Aug 07, 2020 | Karthik A |

ಕಲ್ಲಿಕೋಟೆ: ದುಬೈನಿಂದ ಬರುತ್ತಿದ್ದ ಏರ್‌ ಇಂಡಿಯಾ ವಿಮಾನ ಕಲ್ಲಿಕೋಟೆ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಸಂಜೆ 7.45ರ ಸುಮಾರಿಗೆ ದೊಡ್ಡ ಅಪಘಾತ ಸಂಭವಿಸಿದೆ.

Advertisement

ಲ್ಯಾಂಡಿಂಗ್‌ ಸಮಯದಲ್ಲಿ ಅಪಘಾತಕ್ಕೀಡಾಗಿದ್ದು, ಇದು ದಶಕಗಳ ಹಿಂದೆ ನಡೆದ ಮಂಗಳೂರು ವಿಮಾನ ದುರಂತವನ್ನು ನೆನಪಿಸಿದೆ.

ಈ ವಿಮಾನದಲ್ಲಿ 180 ಪ್ರಯಾಣಿಕರು ಇದ್ದರು ಎಂದು ತಿಳಿದು ಬಂದಿದ್ದು, ಪೈಲಟ್‌ ಸಾವಿನ ಸುದ್ದಿ ಹೊರಬರುತ್ತಿದೆ. 2 ಮಕ್ಕಳು ಸಾವನ್ನಪ್ಪಿದ್ದರು ಎಂಬ ಮಾಹಿತಿಯೂ ಇದೆ.

ವಿಮಾನದ ಮುಂಭಾಗದ ಭಾಗವು ಭಾರೀ ಪ್ರಮಾಣದಲ್ಲಿ ಹಾನಿಗೊಂಡಿದೆ. ಅಪಘಾತದ ತೀವ್ರತೆಗೆ ವಿಮಾನ ಎರಡು ತುಂಡುಗಳಾಗಿದೆ. ಗಾಯಗೊಂಡ ಜನರನ್ನು ಆಸ್ಪತ್ರೆಗೆ ಕರೆದೊಯ್ಯುಲು ಆ್ಯಂಬುಲೆನ್ಸ್‌ಗಳು ಈಗಾಗಲೇ ಆಗಮಿಸಿವೆ. ಭಾರೀ ಮಳೆಯಿಂದಾಗಿ ಈ ವಿಮಾನ ಅಪಾಘಾತಕ್ಕೆ ಈಡಾಗಿದೆ ಎಂದು ಹೇಳಲಾಗುತ್ತದೆ.

ಬಯಲು 30 ಅಡಿ ಆಳದ ಕಂದಕ
ಭಾರೀ ಮಳೆಯಿಂದ ಈ ದುರ್ಘ‌ಟನೆ ನಡೆದಿದೆ ಎಂದು ಹೇಳಲಾಗಿದೆ. ವರದಿಗಳ ಪ್ರಕಾರ, ಈ ವಿಮಾನವು ರಾತ್ರಿ 7.38ಕ್ಕೆ ವಿಮಾನ ನಿಲ್ದಾಣದಲ್ಲಿ ಇಳಿಯಬೇಕಿತ್ತು. ಈ ಸಮಯದಲ್ಲಿ ಭಾರಿ ಮಳೆಯಾಗುತ್ತಿತ್ತು. ಈ ಮಧ್ಯೆ ಲ್ಯಾಂಡ್‌ ಆದ ವಿಮಾನ ರನ್‌ವೇಗೆ ತಲುಪಿದ ಕೆಲವೇ ಕ್ಷಣದಲ್ಲಿ ರನ್‌ ವೇ ಇಂದ ಜಾರಿದೆ. ಬಳಿಕ ಇದು 30 ಅಡಿ ಆಳದಕ್ಕೆ ತಳ್ಳಲ್ಪಟ್ಟಿದೆ ಎಂದು ಹೇಳಲಾಗುತ್ತಿದೆ.

Advertisement

ಇದನ್ನೂ ಓದಿ: ಕಲ್ಲಿಕೋಟೆ: ರನ್ ವೇನಿಂದ ಜಾರಿ ಕಮರಿಗೆ ಉರುಳಿದ ವಿಮಾನ ; ಪೈಲಟ್ ಸಹಿತ 14 ಸಾವು

ಮಂಗಳೂರಿನಲ್ಲೂ ಇದೇ ಆಗಿತ್ತು

ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 2010ರ ಮೇ 22ರ ಬೆಳಗ್ಗೆ 6.15ಕ್ಕೆ ನಡೆದ ವಿಮಾನ ಅಪಘಾತಕ್ಕೆ ಸರಿ ಸಮಾನಾಗಿ ಈ ದುರಂತವನ್ನು ಪರಿಗಣಿಸಲಾಗುತ್ತದೆ. ಪೈಲಟ್‌, ಸಿಬಂದಿ ಸೇರಿ 158 ಮಂದಿ ಮೃತಪಟ್ಟಿದ್ದರು. 135 ಮಂದಿ ವಯಸ್ಕರು, 19 ಮಕ್ಕಳು ಹಾಗೂ 4 ಶಿಶುಗಳು, 6 ಮಂದಿ ವಿಮಾನ ಸಿಬಂದಿ ಸೇರಿ ಒಟ್ಟು 166 ಮಂದಿ ಪ್ರಯಾಣಿಸುತ್ತಿದ್ದರು. ಈ ದುರ್ಘ‌ಟನೆಯಲ್ಲಿ 8 ಮಂದಿ ಬದುಕುಳಿದಿದ್ದರು.

ಕ್ಯಾಲಿಕಟ್‌ನಂತೆ ದುಬೈನಿಂದ ಮಂಗಳೂರಿಗೆ ಆಗಮಿಸಿದ್ದ ವಿಮಾನ ದುರಂತಕ್ಕೀಡಾಗಿತ್ತು. ರನ್‌ವೇಗೆ ಇಳಿದ ವಿಮಾನ ಸ್ವಲ್ಪ ದೂರ ಕ್ರಮಿಸಿ ನೋಡುತ್ತಿದ್ದಂತೆಯೇ ವಿಮಾನ ಎರಡು ತುಂಡಾಗಿ ಹೊತ್ತಿ ಉರಿದಿತ್ತು.

 

Advertisement

Udayavani is now on Telegram. Click here to join our channel and stay updated with the latest news.

Next