Advertisement

ಏರ್‌ಪೋರ್ಟ್‌ ಬಾಂಬ್‌ ಪ್ರಕರಣ: ಶೀಘ್ರ ಚಾರ್ಜ್‌ಶೀಟ್‌ ಸಲ್ಲಿಕೆ

01:32 PM May 08, 2020 | mahesh |

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್‌ ಇರಿಸಿದ್ದ ಪ್ರಕರಣದ ಆರೋಪಿ ಆದಿತ್ಯರಾವ್‌ನ ತನಿಖಾ ಪ್ರಕ್ರಿಯೆ ಮುಗಿದು ಆರೋಪ ಪಟ್ಟಿ ಸಿದ್ಧ ವಾಗಿದ್ದು, ಅದನ್ನು ಜಿಲ್ಲಾಧಿಕಾರಿಗಳ ಅನುಮತಿ ಪಡೆದು ರಾಜ್ಯ ಸರಕಾರದ ಅನುಮತಿಗಾಗಿ ಕಳುಹಿಸಲಾಗಿದೆ. ರಾಜ್ಯ ಸರಕಾರದ ಅನುಮತಿ ಲಭಿಸಿದ ಕೂಡಲೇ ಈ ಪ್ರಕರಣದ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು ಎಂದು ಅಧಿಕೃತ ಮೂಲಗಳು ತಿಳಿಸಿವೆ. ಮಂಗಳೂರು ಉತ್ತರ ಉಪ ವಿಭಾಗದ ಎಸಿಪಿ ಕೆ.ಯು. ಬೆಳ್ಳಿಯಪ್ಪ ಅವರು ಪ್ರಕರಣದ ತನಿಖಾಧಿಕಾರಿಯಾಗಿದ್ದು, ಇದೀಗ ತನಿಖೆಯನ್ನು ಪೂರ್ಣಗೊಳಿಸಿ ಸುಮಾರು 900 ಪುಟಗಳ ಆರೋಪ ಪಟ್ಟಿ ಸಿದ್ಧ ಪಡಿಸಲಾಗಿದೆ.

Advertisement

ಬ್ರೈನ್‌ ಮ್ಯಾಪಿಂಗ್‌ ಬಾಕಿ
ನ್ಯಾಯಾಂಗ ಬಂಧನದಲ್ಲಿ ಇರುವ ಆರೋಪಿ ಆದಿತ್ಯ ರಾವ್‌ನ ಗುರುತು ಪತ್ತೆ ಪರೇಡ್‌ನ್ನು ಪೂರ್ತಿಗೊಳಿಸಿದ್ದು, ಇದೀಗ ಬ್ರೈನ್‌ ಮ್ಯಾಪಿಂಗ್‌ ಪ್ರಕ್ರಿಯೆ ಮಾತ್ರ ಬಾಕಿ ಇದೆ. ಬ್ರೈನ್‌ ಮ್ಯಾಪಿಂಗ್‌ ನಡೆಸುವ ಬಗ್ಗೆ ಆರೋಪಿಯ ಅನುಮತಿಯನ್ನು ಪಡೆಯಲಾಗಿದೆ. ಈಗಾಗಲೇ ಈ ಪ್ರಕ್ರಿಯೆಯನ್ನು ಮುಗಿಸ ಬೇಕಾಗಿತ್ತು; ಆದರೆ ಲಾಕ್‌ಡೌನ್‌ ಪ್ರಯುಕ್ತ ವಿಳಂಬವಾಗಿದೆ. ಲಾಕ್‌ಡೌನ್‌ ತೆರವಾದ ಕೂಡಲೇ ಆತನನ್ನು ಬೆಂಗಳೂರಿಗೆ ಕರೆದೊಯ್ದು ಬ್ರೈನ್‌ ಮ್ಯಾಪಿಂಗ್‌ ಪ್ರಕ್ರಿಯೆ ನಡೆಸಲು ಪೊಲೀಸರು ನಿರ್ಧರಿಸಿದ್ದಾರೆ.

ಹಿನ್ನೆಲೆ
ಆರೋಪಿ ಆದಿತ್ಯ ರಾವ್‌ 2020 ಜ. 20ರಂದು ಮಂಗಳೂರು ಅಂತಾ ರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್‌ ಬಿಲ್ಡಿಂಗ್‌ನ ಟಿಕೆಟ್‌ ಕೌಂಟರ್‌ ಬಳಿ ಪ್ರಯಾಣಿಕರು ಕುಳಿತು ಕೊಳ್ಳುವ ಕುರ್ಚಿಯಲ್ಲಿ ಬಾಂಬ್‌ ಇದ್ದ ಬ್ಯಾಗ್‌ ಇರಿಸಿ ಬಳಿಕ ಪಾರ್ಕಿಂಗ್‌ ಪ್ರದೇಶದಲ್ಲಿದ್ದ ಆಟೋ ರಿಕ್ಷಾ ಏರಿ ವಾಪಸಾಗಿದ್ದನು.

Advertisement

Udayavani is now on Telegram. Click here to join our channel and stay updated with the latest news.

Next