Advertisement

ಐಶ್ವರ್ಯಾ ರೈ, ಅಭಿಷೇಕ್‌ ಬಚ್ಚನ್‌ ಇಂದು ಮಂಗಳೂರಿಗೆ

08:27 AM Apr 08, 2017 | Team Udayavani |

ಮಂಗಳೂರು: ಬಾಲಿವುಡ್‌ನ‌ ಖ್ಯಾತ ನಟಿ ಐಶ್ವರ್ಯಾ ರೈ ಹಾಗೂ ಪತಿ ಅಭಿಷೇಕ್‌ ಬಚ್ಚನ್‌ ಎ. 8ರಂದು ಮಂಗಳೂರಿಗೆ ಆಗಮಿಸಲಿದ್ದಾರೆ. ಐಶ್ವರ್ಯಾ ರೈ ಅವರ ತಂದೆ ಕೃಷ್ಣರಾಜ್‌ ರೈ ಅವರು ಇತ್ತೀಚೆಗೆ ಮುಂಬಯಿಯಲ್ಲಿ ನಿಧನ ಹೊಂದಿದ್ದು, ಅವರ ಪಿಂಡ ಪ್ರದಾನ ಕಾರ್ಯಕ್ರಮ ಮಂಗಳೂರಿನಲ್ಲಿ ಶನಿವಾರ ನಡೆಯಲಿದೆ. ಐಶ್ವರ್ಯಾ ದಂಪತಿಯ ಪುತ್ರಿ ಆರಾಧ್ಯ ಹಾಗೂ ಸಹೋದರ ಆದಿತ್ಯ ರೈ ಅವರು ಜತೆಗಿರಲಿದ್ದಾರೆ. 

Advertisement

ಮುಂಬಯಿಯಿಂದ ವಿಮಾನದ ಮೂಲಕ ಬೆಳಗ್ಗೆ 10.45ಕ್ಕೆ ಬಜಪೆ ತಲುಪುವರು. ಅನಂತರ ಅವರು ಶ್ರೀ ಕ್ಷೇತ್ರ ಕದ್ರಿ ಮತ್ತು ಉಪ್ಪಿನಂಗಡಿಯ ಶ್ರೀ ಸಹಸ್ರಧಿಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡುವರು ಎಂದು ಮೂಲಗಳು ತಿಳಿಸಿವೆ. ಪಿಂಡ ಪ್ರದಾನ ಕಾರ್ಯಕ್ರಮ ಮುಗಿದ ಬಳಿಕ ಮಂಗಳೂರಿನ ಖಾಸಗಿ ಹೊಟೇಲ್‌ನಲ್ಲಿ ತಂಗುವ ಅವರು, ರವಿವಾರ ನಗರದ ವಿವಿಧ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ, ಸಂಜೆ ವಿಮಾನದ ಮೂಲಕ ತೆರಳಲಿದ್ದಾರೆ ಎಂದು ತಿಳಿದುಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next