Advertisement

ಅಜೆಕಾರು ಕಲಾಭಿಮಾನಿ ಬಳಗ: ಯಕ್ಷರಕ್ಷಾ ಪ್ರಶಸ್ತಿ ಪ್ರದಾನ

12:11 PM Sep 04, 2018 | Team Udayavani |

ಮುಂಬಯಿ: ಅಜೆಕಾರು ಕಲಾಭಿ ಮಾನಿ ಬಳಗ ಮುಂಬಯಿ ಇದರ ಸಪ್ತದಶಾ ಉತ್ಸವ ಮತ್ತು ಯಕ್ಷರಕ್ಷಾ ಪ್ರಶಸ್ತಿ ಪ್ರದಾನ ಸಮಾರಂಭವು ಆ. 26 ರಂದು ಸಂಜೆ ಕುರ್ಲಾ ಪೂರ್ವದ ಬಂಟರ ಭವನದ ಶ್ರೀಮತಿ ರಾಧಾಬಾಯಿ ಟಿ. ಭಂಡಾರಿ ಸಭಾಗೃಹ, ಬಳಗದ ಗೌರವ ಕಾರ್ಯದರ್ಶಿ ಸ್ವರ್ಗಸ್ಥ ಸುಧಾಕರ ಶೆಟ್ಟಿ ಎಣ್ಣೆಹೊಳೆ ವೇದಿಕೆಯಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು.

Advertisement

ಶ್ರೀ ಕ್ಷೇತ್ರ ಕಟೀಲಿನ  ಪದ್ಮನಾಭ ಅಸ್ರಣ್ಣ ಅವರ ಉಪಸ್ಥಿತಿಯಲ್ಲಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್‌ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಹಿರಿಯ ಯಕ್ಷಗಾನ ಕಲಾವಿದೆ ಪೂರ್ಣಿಮಾ ಯತೀಶ್‌ ರೈ ಅವರಿಗೆ ಯಕ್ಷ ಪೂರ್ಣಿಮ ಬಿರುದು ಪ್ರದಾನಿಸಿ ಪ್ರಶಸ್ತಿ, ಪ್ರಸಿದ್ಧ ನಾಟಕ ರಚನೆಕಾರ, ನಿರ್ದೇಶಕ ನಾರಾಯಣ ಶೆಟ್ಟಿ ನಂದಳಿಕೆ  ಮತ್ತು ಶಾಂತಾ ಎನ್‌. ಶೆಟ್ಟಿ ದಂಪತಿಗೆ, ಹಿರಿಯ ಪತ್ರಕರ್ತ ಶ್ರೀಧರ ಉಚ್ಚಿಲ್‌, ನಾಟಕ ನಿರ್ದೇಶಕ, ಕಿರುತೆರೆ ನಟ ರಮೇಶ್‌ ಶಿವಪುರ ಅವರಿಗೆ “ಯಕ್ಷರûಾ ಪ್ರಶಸ್ತಿ’ಯನ್ನು ಅತಿಥಿ-ಗಣ್ಯರು ಶಾಲು ಹೊದೆಸಿ, ಸ್ಮರಣಿಕೆ, ಫಲಪುಷ್ಪ, ಸಮ್ಮಾನ ಪತ್ರದೊಂದಿಗೆ ಪ್ರದಾನಿಸಿ ಗೌರವಿಸಿದರು. ಪ್ರಶಸ್ತಿ ಪುರಸ್ಕೃತರು ಮಾತನಾಡಿ ಕೃತಜ್ಞತೆ ಸಲ್ಲಿಸಿದರು.

ಶ್ರೀ  ಉಮಾಮಹೇಶ್ವರೀ ದೇವಸ್ಥಾನ ಜೆರಿಮೆರಿ ಇದರ ಪ್ರಧಾನ ಆರ್ಚಕ ಶ್ರೀನಿವಾಸ ಎನ್‌.ಉಡುಪ, ಬಂಟರ ಸಂಘ ಮುಂಬಯಿ ಮಾಜಿ ಅಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ, ಶ್ರೀ ಮಹಾಗಣಪತಿ ಯಕ್ಷಗಾನ ಮಂಡಳಿ ಪುಣೆ ಅಧ್ಯಕ್ಷ ಪ್ರವೀಣ್‌ ಶೆಟ್ಟಿ ಪುತ್ತೂರು, ಮುಂಡ್ಕೂರು ರತ್ನಾಕರ ಶೆಟ್ಟಿ, ಸಿಎ| ಸುರೇಂದ್ರ ಎ. ಶೆಟ್ಟಿ, ಪ್ರವೀಣ್‌ ಬಿ. ಶೆಟ್ಟಿ, ಶ್ಯಾಮ್‌ ಎನ್‌. ಶೆಟ್ಟಿ, ಸಿಎ ಸದಾಶಿವ ಶೆಟ್ಟಿ, ಪ್ರಸಿದ್ಧ ಯಕ್ಷಗಾನ ಕಲಾವಿದ ಭಾಸ್ಕರ್‌ ರೈ ಕುಕ್ಕುವಳ್ಳಿ, ಪ್ರಶಾಂತ್‌ ಶೆಟ್ಟಿ ವಗೆನಾಡು, ಗಣೇಶ್‌ ಮಯ್ಯ ವರ್ಕಾಡಿ ಮೊದಲಾದವರು ಉಪಸ್ಥಿತರಿದ್ದರು.

ಮುಂಬಯಿಯ ಪ್ರಸಿದ್ಧ ಭಾಗವತ ಪೊಲ್ಯ ಲಕ್ಷಿ¾àನಾರಾಯಣ ಶೆಟ್ಟಿ ಮತ್ತು ಅರ್ಥದಾರಿ, ಪ್ರಾಚಾರ್ಯ ಪ್ರೊ| ಭಾಸ್ಕರ ರೈ ಕುಕ್ಕುವಳ್ಳಿ ಅಭಿನಂದನಾ  ಭಾಷಣಗೈದರು. ಅಜೆಕಾರು ಬಳಗದ ಸ್ಥಾಪಕಾಧ್ಯಕ್ಷ ಅಜೆಕಾರು ಬಾಲಕೃಷ್ಣ ಶೆಟ್ಟಿ ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು ಆಶಾ ಬಾಲಕೃಷ್ಣ ಶೆಟ್ಟಿ ದಂಪತಿ ಅತಿಥಿಗಳನ್ನು ಸತ್ಕರಿಸಿ ಗೌರವಿಸಿದರು. ಗಣೇಶ್‌ ಕೊಲಕಾಡು ಹೆಬ್ರಿ ಅವರು ಛಂದಸ್ಸು ದಾಟಿಯ ಭಾಮಿನಿ ಪದ್ಯರೂಪದಲ್ಲಿ ಸಮ್ಮಾನ ಪತ್ರವನ್ನು ವಾಚಿಸಿದರು. ಕರ್ನೂರು ಮೋಹನ್‌ ರೈ ಕಾರ್ಯಕ್ರಮ ನಿರೂಪಿಸಿದರು. 

ಚಿತ್ರ-ವರದಿ: ಸುಭಾಶ್‌ ಶಿರಿಯಾ

Advertisement
Advertisement

Udayavani is now on Telegram. Click here to join our channel and stay updated with the latest news.

Next