Advertisement

Ajekar: ಸೇತುವೆಗೆ ಕಾರು ಢಿಕ್ಕಿ

01:14 AM Oct 21, 2024 | Team Udayavani |

ಅಜೆಕಾರು: ಹೆಬ್ರಿ ಕಡೆಯಿಂದ ಕಾರ್ಕಳ ಮಾರ್ಗವಾಗಿ ಧರ್ಮಸ್ಥಳಕ್ಕೆ ಹೋಗುತ್ತಿದ್ದ ಇನ್ನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ಅಜೆಕಾರು ಸಮೀಪದ ಗುಡ್ಡೆಯಂಗಡಿ ಓಟೆಹಳ್ಳ ಸೇತುವೆಗೆ ಢಿಕ್ಕಿ ಹೊಡೆದ ಘಟನೆ ಅ. 20ರ ಮುಂಜಾನೆ ನಡೆದಿದೆ. ಘಟನೆಯಲ್ಲಿ ಚಾಲಕ ಸಹಿತ ಆರು ಮಂದಿ ಗಾಯಗೊಂಡಿದ್ದಾರೆ.

Advertisement

ಹುಬ್ಬಳ್ಳಿ ಮೂಲದವರೆನ್ನಲಾದ ಮಂಜುನಾಥ್‌ ಗೌಡ (28), ಆತ್ಮಾನಂದ (24), ಹನುಮಂತ್‌ ಗೌಡ (23), ಹಾಲಪ್ಪ ಗೌಡ (24), ವೀರಭದ್ರ ಗೌಡ (28) ಮತ್ತು ಬಸನಗೌಡ ( 27) ಅವರು ಗಾಯಗೊಂಡವರು.

ಹೆಬ್ರಿ ಕಡೆಯಿಂದ ಬರುತ್ತಿದ್ದ ಇನ್ನೋವಾ ಕಾರು ಸೇತುವೆಯ ಕಡಿದಾದ ತಿರುವಿನಲ್ಲಿ ನಿಯಂತ್ರಣ ತಪ್ಪಿ ನೇರವಾಗಿ ಸೇತುವೆಯ ತಡಗೋಡೆಗೆ ಅಪ್ಪಳಿಸಿದೆ. ಅಪಘಾತದಿಂದ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಪಘಾತದ ರಭಸಕ್ಕೆ ಕಾರಿನ ಏರ್‌ಬ್ಯಾಗ್‌ಗಳು ತೆರೆದುಕೊಂಡಿರುವುದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಜೆಕಾರು ಪೊಲೀಸರು ಅಪಘಾತದ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next