Advertisement

Ajilamogaru : ಕಾಂಪೌಂಡಿಗೆ ಸ್ಕೂಟರ್‌ ಢಿಕ್ಕಿ; ಸಹಸವಾರ ಗಂಭೀರ

10:17 PM Feb 04, 2024 | Team Udayavani |

ಬಂಟ್ವಾಳ: ಮಣಿನಾಲ್ಕೂರು ಗ್ರಾಮದ ಅಜಿಲಮೊಗರಿನಲ್ಲಿ ಸ್ಕೂಟರೊಂದು ಸವಾರನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಾಂಪೌಂಡಿಗೆ ಢಿಕ್ಕಿ ಹೊಡೆದು ಸಹಸವಾರ ಗಂಭೀರ ಗಾಯಗೊಂಡಿದ್ದಾರೆ.

Advertisement

ಗಾಯಗೊಂಡಿರುವ ಮಂಗಳೂರು ಅಶೋಕನಗರ ನಿವಾಸಿ ಶ್ವಾನ್‌ ವೇಗಸ್‌ ಅವರು ಮಂಗಳೂರು ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಅಪಘಾತವು ಫೆ. 1ರಂದು ನಡೆದಿದ್ದು, ಸಹಸವಾರನ ತಂದೆ ಜಾಯ್‌ ಜೀವನ್‌ ಪ್ರಕಾಶ್‌ ವೇಗಸ್‌ ಅವರು ಫೆ. 3ರಂದು ಪೊಲೀಸರಿಗೆ ದೂರು ನೀಡಿದ್ದಾರೆ. ಸವಾರ ಲೂಯಿಸ್‌ ಪಾಯಿಸ್‌ ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ಚಲಾಯಿಸಿದ ಪರಿಣಾಮ ಅಪಘಾತ ಸಂಭವಿಸಿದೆ ಎಂದು ದೂರಿನಲ್ಲಿ ತಿಳಿಸಿದ್ದು, ಬಂಟ್ವಾಳ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next