Advertisement

ಮಹಾರಾಷ್ಟ್ರ ಸಿಎಂ ಪರಿಹಾರ ನಿಧಿಗೆ 10 ಲಕ್ಷ ದೇಣಿಗೆ ನೀಡಿದ ಅಜಿಂಕ್ಯ ರಹಾನೆ

05:57 PM Mar 29, 2020 | keerthan |

ಮುಂಬೈ: ಟೀಂ ಇಂಡಿಯಾ ಟೆಸ್ಟ್ ಉಪನಾಯಕ ಅಜಿಂಕ್ಯ ರಹಾನೆ ಮಹಾರಾಷ್ಟ್ರ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಹತ್ತು ಲಕ್ಷ ರೂ. ದೇಣಿಗೆ ನೀಡಿದ್ದಾರೆ.

Advertisement

ದೇಶದಲ್ಲಿ ಕೋವಿಡ್-19 ಸೋಂಕಿಗೆ ಅತೀ ಹೆಚ್ಚು ಸಂಕಷ್ಟಕ್ಕೆ ಒಳಗಾಗಿರುವುದು ಮಹಾರಾಷ್ಟ್ರ. ಆ ಕಾರಣದಿಂದ ಜನರಿಗೆ ನೆರವಾಗುವ ದೃಷ್ಟಿಯಲ್ಲಿ ಮುಂಬೈ ಮೂಲದ ಅಜಿಂಕ್ಯ ರಹಾನೆ ಹತ್ತು ಲಕ್ಷ ರೂ ದೇಣಿಗೆ ನೀಡಿದ್ದಾರೆ ಎನ್ನಲಾಗಿದೆ.

ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ 50 ಲಕ್ಷ ರೂ ನೀಡಿದ್ದರೆ, ಎಡಗೈ ಆಟಗಾರ ಸುರೇಶ್ ರೈನಾ 52 ಲಕ್ಷ ರೂ ನೀಡಿದ್ದಾರೆ.

ದೇಶದಾದ್ಯಂತ ಕ್ರೀಡಾಪಟುಗಳು, ಸಿನಿಮಾ ನಟರು ಜನರ ಒಳಿತಿಗಾಗಿ ಪರಿಹಾರ ನಿಧಿಗೆ ಹಣ ನೀಡುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next