Advertisement

ಬಿಜೆಪಿ ಜತೆಗೆ ಮೈತ್ರಿ ಅಂತ್ಯ; ಪಂಜಾಬ್ ಚುನಾವಣೆಯಲ್ಲಿ ಅಕಾಲಿ ದಳ, ಬಿಎಸ್ಪಿ ಮೈತ್ರಿ

11:22 AM Jun 12, 2021 | Team Udayavani |

ನವದೆಹಲಿ: ಕೇಂದ್ರ ಸರ್ಕಾರದ ವಿವಾದಿತ ಕೃಷಿ ಮಸೂದೆ ಜಾರಿಗೆ ತಂದ ನಂತರ ಬಿಜೆಪಿ ಜತೆಗಿನ ಮೈತ್ರಿ ಕಡಿದುಕೊಂಡಿದ್ದ ಶಿರೋಮಣಿ ಅಕಾಲಿ ದಳ ಮುಂಬರುವ (2022) ವಿಧಾನಸಭಾ ಚುನಾವಣೆಯಲ್ಲಿ ಬಹುಜನ್ ಸಮಾಜ ಪಕ್ಷದ ಜತೆ ಮೈತ್ರಿ ಮಾಡಿಕೊಂಡು ಕಣಕ್ಕಿಳಿಯಲು ನಿರ್ಧರಿಸಿರುವುದಾಗಿ ಮೂಲಗಳು ತಿಳಿಸಿವೆ.

Advertisement

ಇದನ್ನೂ ಓದಿ:Article 370 ಕುರಿತು ಪಾಕಿಸ್ತಾನಿ ಪ್ರಜೆಗೆ ದಿಗ್ವಿಜಯ ಸಿಂಗ್ ಹೇಳಿದ ಮಾತು ಲೀಕ್

ಕಳೆದ ಸೆಪ್ಟೆಂಬರ್ ನಲ್ಲಿ ಬಿಜೆಪಿ ಜತೆಗಿನ ಮೈತ್ರಿಯನ್ನು ಕಡಿದುಕೊಂಡ ನಂತರ ಬಿಎಸ್ಪಿ ಜತೆಗಿನ ಹೊಸ ಮೈತ್ರಿಯೊಂದಿಗೆ ಸುಖ್ ಬೀರ್ ಸಿಂಗ್ ಬಾದಲ್ ನೇತೃತ್ವದ ಪಕ್ಷ ಹಲವಾರು ಸ್ಥಾನಗಳಲ್ಲಿ ಗೆಲುವು ಸಾಧಿಸುವ ಲೆಕ್ಕಾಚಾರ ಹೊಂದಿರುವುದಾಗಿ ವರದಿ ವಿವರಿಸಿದೆ.

1996ರ ಲೋಕಸಭಾ ಚುನಾವಣೆಯ 27 ವರ್ಷಗಳ ನಂತರ ಅಕಾಲಿ ದಳ ಮತ್ತು ಬಿಎಸ್ಇ ಮತ್ತೆ ಕೈಜೋಡಿಸಿದೆ. 1996ರಲ್ಲಿ ಅಕಾಲಿದಳ, ಬಿಎಸ್ಪಿ ಮೈತ್ರಿ ಪಂಜಾಬ್ ನ 13 ಸ್ಥಾನಗಳಲ್ಲಿ 11 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿತ್ತು. ಮಾಯಾವತಿ ನೇತೃತ್ವದ ಬಿಎಸ್ಪಿ ಸ್ಪರ್ಧಿಸಿದ್ದ ಮೂರು ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದರೆ, ಅಕಾಲಿ ದಳ 10ರಲ್ಲಿ ಎಂಟು ಕ್ಷೇತ್ರಗಳಲ್ಲಿ ಜಯ ಸಾಧಿಸಿತ್ತು ಎಂದು ವರದಿ ತಿಳಿಸಿದೆ.

2022ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್, ಬಿಜೆಪಿ ಮತ್ತು ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷವನ್ನು ಹೊರತುಪಡಿಸಿ ಇತರ ಪಕ್ಷದ ಜತೆ ತಮ್ಮ ಪಕ್ಷ ಮೈತ್ರಿ ಮಾಡಿಕೊಳ್ಳಲು ಮುಕ್ತವಾಗಿದೆ ಎಂದು ಸುಖ್ ಬೀರ್ ಸಿಂಗ್ ಬಾದಲ್ ಘೋಷಿಸಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next