Advertisement

Maharashtra ಸೆ.14ರಿಂದ ಪುಣೆಯಲ್ಲಿ ಅಖಿಲ ಭಾರತೀಯ ಸಮನ್ವಯ ಬೈಠಕ್‌

08:53 PM Sep 04, 2023 | Team Udayavani |

ನವದೆಹಲಿ: ಮಹಾರಾಷ್ಟ್ರದ ಪುಣೆಯಲ್ಲಿ ಸೆ.14ರಿಂದ 16ರವರೆಗೆ ಆರ್‌ಎಸ್‌ಎಸ್‌ ವತಿಯಿಂದ ಅಖಿಲ ಭಾರತೀಯ ಸಮನ್ವಯ ಬೈಠಕ್‌ ಆಯೋಜಿಸಲಾಗಿದೆ. ಅದರಲ್ಲಿ ರಾಷ್ಟ್ರೀಯ ಭದ್ರತೆ, ದೇಶದ ಸಾಮಾಜಿಕ-ಆರ್ಥಿಕ ಸ್ಥಿತಿಗತಿ, ಸಾಮಾಜಿಕ ಸಾಮರಸ್ಯ, ಪರಿಸರ ಸೇರಿದಂತೆ ಹಲವು ಪ್ರಮುಖ ವಿಷಯಗಳ ಕುರಿತು ಚರ್ಚೆ ನಡೆಯಲಿದೆ.

Advertisement

ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವಾತ್‌, ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ, ಎಲ್ಲಾ ಐದು ಜಂಟಿ ಪ್ರಧಾನ ಕಾರ್ಯದರ್ಶಿಗಳು, ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ರಾಷ್ಟ್ರ ಸೇವಿಕಾ ಸಮಿತಿ, ವಿಶ್ವ ಹಿಂದೂ ಪರಿಷತ್‌, ವನವಾಸಿ ಕಲ್ಯಾಣ ಆಶ್ರಮ್‌, ಸಂಸ್ಕಾರ ಭಾರತೀ, ಸೇವಾ ಭಾರತೀ, ಸಂಸ್ಕೃತಿ ಭಾರತೀ ಸೇರಿದಂತೆ ಆರ್‌ಎಸ್‌ಎಸ್‌ನ 35 ಅಂಗಸಂಸ್ಥೆಗಳ ಮುಖ್ಯಸ್ಥರು ಭಾಗವಹಿಸಲಿದ್ದಾರೆ.

ಕಳೆದ ವರ್ಷ ಛತ್ತೀಸಗಢದಲ್ಲಿ ಆರ್‌ಎಸ್‌ಎಸ್‌ ವತಿಯಿಂದ ಅಖಿಲ ಭಾರತೀಯ ಸಮನ್ವಯ ಬೈಠಕ್‌ ನಡೆದಿತ್ತು.

Advertisement

Udayavani is now on Telegram. Click here to join our channel and stay updated with the latest news.

Next