Advertisement

ಬೆಂಗಳೂರಿನಲ್ಲಿ ವೇದಿಕೆ ಹಂಚಿಕೊಳ್ಳುವ ಮಾಯಾವತಿ, ಅಖೀಲೇಶ್‌

03:51 PM May 22, 2018 | udayavani editorial |

ಲಕ್ನೋ : ನಾಳೆ ಬುಧವಾರ ಬೆಂಗಳೂರಿನಲ್ಲಿ ನಡೆಯಲಿರುವ ಜೆಡಿಎಸ್‌ ನಾಯಕ ಎಚ್‌ ಡಿ ಕುಮಾರಸ್ವಾಮಿ ಅವರ CM ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಉತ್ತರ ಪ್ರದೇಶದ ಇಬ್ಬರು ಮಾಜಿ ಮುಖ್ಯಮಂತ್ರಿಗಳಾಗಿರುವ ಬಹುಜನ ಸಮಾಜವಾದಿ ಪಕ್ಷದ ಮುಖ್ಯಸ್ಥೆ ಮಾಯಾವತಿ ಮತ್ತು ಸಮಾಜವಾದಿ ಪಕ್ಷದ ನಾಯಕ ಅಖೀಲೇಶ್‌ ಯಾದವ್‌ ಅವರು ಭಾಗವಹಿಸಲಿದ್ದಾರೆ. 

Advertisement

ಉತ್ತರ ಪ್ರದೇಶ ರಾಜಕಾರಣದಲ್ಲಿ ಹಾವು -ಮುಂಗುಸಿಯಂತಿದ್ದ ಈ ಇಬ್ಬರು ನಾಯಕರು  ಕಳೆದ ವಿಧಾನಸಭಾ ಚುನಾವಣೆಯ ಬಳಿಕ ಮೂಲೆಗುಂಪಾದ ಅನಂತರದಲ್ಲಿ ಪುನಃ ತಮ್ಮ ಅಸ್ತಿತ್ವ ಕಾಣಲು ಜತೆಗೂಡಿ, ಲೋಕಸಭಾ ಉಪಚುನಾವಣೆ ಕಂಡ ಉ.ಪ್ರ.ದ ಗೋರಖ್‌ಪುರ ಮತ್ತು ಫ‌ೂಲ್‌ಪುರ ಕ್ಷೇತ್ರಗಳನ್ನು ಗೆದ್ದುಕೊಂಡು ಹೊಸ ಹುಮ್ಮಸ್ಸಿನಲ್ಲಿದ್ದಾರೆ; ಆದರೂ ಈ ನಾಯಕರಿಬ್ಬರು ಒಂದೇ ಸಾರ್ವಜನಿಕ ವೇದಿಕೆಯಲ್ಲಿ ಕಾಣಿಸಿಕೊಂಡಿಲ್ಲ. 

ಎಚ್‌ ಡಿ ಕುಮಾರ ಸ್ವಾಮಿ ಅವರು ಉತ್ತರ ಪ್ರದೇಶದ ಈ ಇಬ್ಬರೂ ನಾಯಕರನ್ನು ತಮ್ಮ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಆಹ್ವಾನಿಸಿದ್ದಾರೆ ಮತ್ತು ಅವರು ಭಾಗವಹಿಸುತ್ತಾರೆ ಎಂದು ಎಸ್‌ಪಿ ವಕ್ತಾರ ರಾಜೇಂದ್ರ ಚೌಧರಿ ತಿಳಿಸಿದ್ದಾರೆ. 

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next