Advertisement

ಮತ್ತೆ ಕದನ ವಿರಾಮ ಉಲ್ಲಂಘಿಸಿದ ಪಾಕ್: ನಾಗರಿಕರನ್ನು ಗುರಿಯಾಗಿರಿಸಿಕೊಂಡು ಗುಂಡಿನ ದಾಳಿ

10:03 AM Oct 14, 2019 | Team Udayavani |

ಶ್ರೀನಗರ : ಗಡಿ ಪ್ರದೇಶದ ನಾಗರಿಕರನ್ನು ಗುರಿಯಾಗಿಸಿಕೊಂಡು ಪಾಕ್ ಸೇನೆ ಮತ್ತೆ  ಅಪ್ರಚೋದಿತ ಗುಂಡಿನ ದಾಳಿ ಮತ್ತು ಶೆಲ್ ದಾಳಿ ನಡೆಸುತ್ತಿದೆ.

Advertisement

ಜಮ್ಮುಕಾಶ್ಮೀರದ  ಕಥುವಾ ಜಿಲ್ಲೆಯ ಹಿರಾನಗರ್ ಸೆಕ್ಟರ್ ನ ಅಂತರಾಷ್ಟ್ರೀಯ ಗಡಿಯಲ್ಲಿ ಪಾಕ್ ಸೈನಿಕರು   ಕದನ ವಿರಾಮ ಉಲ್ಲಂಘಿಸಿ ನಾಗರಿಕರನ್ನು ಗುರಿಯಾಗಿರಿಸಿಕೊಂಡು ಶೆಲ್ ದಾಳಿ ನಡೆಸಿದ್ದಾರೆ. ಶನಿವಾರ ಸಂಜೆ ಆರಂಭವಾದ ಗುಂಡಿನ ದಾಳಿ ಭಾನುವಾರ ಬೆಳಗ್ಗೆ 5:30ರ ವರೆಗೂ ಮುಂದುವರೆದಿತ್ತು.

ಈ ಹಿಂದೆ ರಜೌರಿ ಗಡಿ ನಿಯಂತ್ರಣದುದ್ದಕ್ಕೂ ಅಪ್ರಚೋದಿತ ಶೆಲ್ ದಾಳಿ ನಡೆಸಿದ ಪರಿಣಾಮ ಭಾರತೀಯ ಯೋಧರೊಬ್ಬರು ಹುತಾತ್ಮರಾಗಿದ್ದರು.  ಜಮ್ಮು ಕಾಶ್ಮೀರಕ್ಕಿದ್ದ ವಿಶೇಷ ಸ್ಥಾನ ಮಾನ ರದ್ದುಗೊಳಿಸಿದ ನಂತರ ಪಾಕ್ ಪದೇ ಪದೇ ಕದನ ವಿರಾಮ ಉಲ್ಲಂಘಸುತ್ತಿದೆ ಎಂದು ಮಾಧ್ಯಮದ  ವರದಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next