Advertisement

ಡ್ರಗ್ ದಂಧೆ: ನಿರೂಪಕ ಅಕುಲ್, ಸಂತೋಷ್, ಕಾಂಗ್ರೆಸ್ ನ ಮಾಜಿ ಶಾಸಕರ ಪುತ್ರನಿಗೆ ಸಿಸಿಬಿ ಶಾಕ್

04:28 PM Sep 18, 2020 | keerthan |

ಬೆಂಗಳೂರು: ಚಂದನವನದಲ್ಲಿ ನಶೆ ಧೂಮ ಗಾಢವಾಗಿ ಹಬ್ಬುತ್ತಿದೆ. ರಾಗಿಣಿಯಿಂದ ಆರಂಭವಾದ ನಶೆ ನಂಟಿನ ಜಾಲ ಈಗ ಸ್ಟಾರ್ ನಿರೂಪಕ ಅಕುಲ್ ಬಾಲಾಜಿ ವರೆಗೆ ಬಂದು ತಲುಪಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ಸಿಸಿಬಿ ಪೊಲೀಸರು ನಿರೂಪಕ ಅಕುಲ್, ನಟ ಸಂತೋಷ್ ಕುಮಾರ್ ಮತ್ತು ಕಾಂಗ್ರೆಸ್ ಶಾಸಕ ಆರ್ ವಿ ದೇವರಾಜ್ ಮಗ ಯುವರಾಜ್ ಗೆ ನೋಟಿಸ್ ನೀಡಿದ್ದಾರೆ.

Advertisement

ಇವರುಗಳಿಗೆ ಇಂದು ವಾಟ್ಸಪ್ ಮೂಲಕ ನೋಟಿಸ್ ನೀಡಲಾಗಿದೆ. ನಾಳೆ ಸಿಸಿಬಿ ಕಚೇರಿಗೆ ಹಾಜರಾಗಿ ವಿಚಾರಣೆ ಎದುರಿಸುವಂತೆ ಸೂಚಿಸಿಲಾಗಿದೆ.

ಅಕುಲ್ ಬಾಲಾಜಿ ಖ್ಯಾತ ನಿರೂಪಕರಾಗಿದ್ದು, ಖಾಸಗಿ ವಾಹಿನಿಗಳಲ್ಲಿ ರಿಯಾಲಿಟಿ ಶೋ ನಡೆಸಿಕೊಡುತ್ತಿದ್ದರು. ನಟ ಸಂತೋಷ್ ಕುಮಾರ್ ‘ ನೂರು ಜನ್ಮಕೂ’, ‘ಮಾತಾಡ್ ಮಾತಾಡ್ ಮಲ್ಲಿಗೆ’ ಸೇರಿದಂತೆ ಕೆಲವು ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಈಗಾಗಲೇ ನ್ಯಾಯಾಂಗ ಬಂಧನದಲ್ಲಿರುವ ನಟಿ ಸಂಜನಾ ಜೊತೆ ಸಂತೋಷ್ ಪಾರ್ಟಿಗಳಲ್ಲಿ ಕಾಣಿಸಿಕೊಂಡಿರುವ ಫೋಟೊ ವೈರಲ್ ಆಗುತ್ತಿದೆ.

ಇದನ್ನೂ ಓದಿ: ರಜೌರಿಯ ಗುಂಡಿನ ಮೊರೆತಗಳ ನಡುವೆ ಅರಳಿದ ಕ್ರಿಕೆಟ್ ಪ್ರತಿಭೆ ಅಬ್ದುಲ್‌ ಸಮದ್

ಚಾಮರಾಜಪೇಟೆ ಮಾಜಿ ಶಾಸಕ ಆರ್ ವಿ ದೇವರಾಜ್ ಮಗ ಯುವರಾಜ್ ಗೂ ಸಿಸಿಬಿ ಪೊಲೀಸರು ನೋಟಿಸ್ ನೀಡಿದ್ದಾರೆ. ಈ ಪ್ರಕರಣದಲ್ಲಿ ನನ್ನ ಹೆಸರು ಹೇಗೆ ಬಂತು ಎನ್ನುವುದು ಗೊತ್ತಿಲ್ಲ. ಸಿಕ್ಕಿಬಿದ್ದಿರುವ ಯಾವ ಆರೋಪಿಗಳೊಂದಿಗೆ ನನಗೆ ಸಂಪರ್ಕವಿಲ್ಲ ಎಂದು ಯುವರಾಜ್ ಹೇಳಿಕೊಂಡಿದ್ದಾರೆ.

Advertisement

ಸ್ಯಾಂಡಲ್ ವುಡ್ ಡ್ರಗ್ ಪ್ರಕರಣದಲ್ಲಿ ನಟಿ ರಾಗಿಣಿ ಮತ್ತು ಸಂಜನಾ ಈಗಾಗಲೇ ನ್ಯಾಯಾಂಗ ಬಂಧನ ಎದುರಿಸುತ್ತಿದ್ದಾರೆ. ಸ್ಟಾರ್ ದಂಪತಿ ದಿಗಂತ್ ಮತ್ತು ಐಂದ್ರಿತಾ ರೇ ಸಿಸಿಬಿ ವಿಚಾರಣೆ ಎದುರಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next