Advertisement

ಕೆರೆ ಪೂರ್ತಿ ತುಂಬಿ: ಕುಲಕರ್ಣಿ

04:52 PM Apr 25, 2020 | Naveen |

ಆಲಮಟ್ಟಿ: ಮುಳವಾಡ ಏತ ನೀರಾವರಿ ಯೋಜನೆಯಿಂದ ಜಿಲ್ಲೆಯ ಕೆರೆಗಳನ್ನು ಅರ್ಧದಷ್ಟು ತುಂಬಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅಧಿಕಾರಿಗಳು ಹೇಳುತ್ತಿರುವುದು ಜಿಲ್ಲೆಯ ರೈತಾಪಿ ವರ್ಗ ಆತಂಕಪಡುವಂತಾಗಿದೆ ಎಂದು ಅಖಂಡ ಕರ್ನಾಟಕ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಹೇಳಿದರು.

Advertisement

ಈ ಕುರಿತು ಪ್ರಕಟಣೆಯಲ್ಲಿ ನೀಡಿರುವ ಅವರು, ರೈತರ ಒತ್ತಾಯದ ಮೇರೆಗೆ ಕೃ.ಮೇ.ಯೋ. ವ್ಯಾಪ್ತಿಯ ಮುಳವಾಡ ಏತ ನೀರಾವರಿ ಹಾಗೂ ಚಿಮ್ಮಲಗಿ ಏತ ನೀರಾವರಿ ಯೋಜನೆಗಳ 97 ಕೆರೆಗಳನ್ನು ಅರ್ಧ ಮಾತ್ರ ತುಂಬಿಸಿದರೆ ಬೇಸಿಗೆಯ ಪ್ರಖರ ಬಿಸಿಲಿನಿಂದ ಸಾಕಷ್ಟು ಪ್ರಮಾಣದಲ್ಲಿ ಭಾಷ್ಪೀಭವನ ಹೊಂದುತ್ತದೆ. ಅಲ್ಲದೇ ಭೂಮಿಯಲ್ಲಿಯೂ ನೀರು ಇಂಗುತ್ತದೆ. ಇದರಿಂದ ಮಳೆಗಾಲ ಆರಂಭವಾಗುವುದಕ್ಕಿಂತಲೂ ಮುಂಚಿತವಾಗಿಯೇ ಮತ್ತೆ ಜನ-ಜಾನುವಾರುಗಳು ನೀರಿಗಾಗಿ ಪರದಾಡುವ ಸ್ಥಿತಿ ಬರಲಿದೆ. ಖಾಲಿಯಾಗಿರುವ ಕೆರೆಗಳನ್ನು ತುಂಬಿಸಬೇಕಾದರೆ ಕಾಲುವೆಗಳ ಹೂಳು ತೆಗೆಯುವ ಕೆಲಸ ಅರ್ಧಕ್ಕೆ ನಿಲ್ಲಿಸಬೇಕಾಗುತ್ತದೆ. ಇಲ್ಲವೇ ಕೆರೆಗಳನ್ನು ನೀರು ತುಂಬಿಸದೇ ಕಾಮಗಾರಿ ನೆಪ ಹೇಳಲಾಗುತ್ತದೆ. ಆದ್ದರಿಂದ ಎಲ್ಲ ಕೆರೆಗಳನ್ನು ಸಂಪೂರ್ಣವಾಗಿ ತುಂಬಿಸಬೇಕು. ಇದರಿಂದ ಕುಡಿಯುವ ನೀರಿಗಾಗಿ ಪರದಾಡುವದು ತಪ್ಪುತ್ತದೆ ಎಂದು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next