Advertisement

ಆಲಮೇಲ ಪ.ಪಂ. ಮಾಜಿ ಸದಸ್ಯ, ರೌಡಿ ಶೀಟರ್ ಪ್ರದೀಪ್ ಹತ್ಯೆ

08:32 AM Dec 03, 2021 | Team Udayavani |

ವಿಜಯಪುರ: ಜಿಲ್ಲೆಯ ಆಲಮೇಲ ಪಟ್ಟಣದಲ್ಲಿ ರೌಡಿ ಶೀಟರ್ ಆಗಿದ್ದ ಪಟ್ಟಣ ಪಂಚಾಯತ್ ಮಾಜಿ ಸದಸ್ಯ ಪ್ರದೀಪ ಎಂಟಮಾನ್ (37 ವ) ಭೀಕರ ಹತ್ಯೆಯಾಗಿದೆ.

Advertisement

ಶುಕ್ರವಾರ ಬೆಳಿಗ್ಗೆ ಒಂದು  ಗಂಟೆ ಸುಮಾರಿಗೆ ಆಲಮೇಲ ಪಟ್ಟಣದ ಯುಕೆಪಿ ಕ್ಯಾಂಪ್ ಬಳಿಯ ಸರ್ಕಾರಿ ಶಾಲೆಯ ಆವರಣದಲ್ಲಿ ಪ್ರದೀಪ ಎಂಟಮಾನ‌ನನ್ನು ಹತ್ಯೆ ಮಾಡಲಾಗಿದೆ.

ಬಡಿಗೆ, ಕಲ್ಲುಗಳಿಂದ ದಾಳಿ ನಡೆಸಿರುವ ಹಂತಕರು, ತಲೆಗೆ ಬಲವಾಗಿ ಹೊಡೆದಿರುವ ಕಾರಣ ಪ್ರದೀಪ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಇದನ್ನೂ ಓದಿ:ಒಮಿಕ್ರಾನ್‌: ಉಡುಪಿಯಲ್ಲಿ ಸಕಲ ಮುನ್ನೆಚ್ಚರಿಕೆ: ಜಿಲ್ಲಾಧಿಕಾರಿ ಕೂರ್ಮಾ ರಾವ್‌

ಸುದ್ದಿ ತಿಳಿಯುತ್ತಲೇ ಸ್ಥಳಕ್ಕೆ ಧಾವಿಸಿರುವ ಇಂಡಿ ಡಿಎಸ್ಪಿ ಶ್ರೀಧರ ದೊಡ್ಡಿ, ಪರಿಶೀಲನೆ ನಡೆಸಿದ್ದಾರೆ. ಹಂತಕರ ಪತ್ತೆಗೆ ಬೆನ್ನು ಬಿದ್ದಿರುವ ಆಲಮೇಲ ಪೊಲಿಸರು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next