Advertisement

ಕೇಂದ್ರಕ್ಕೆ ಸೆಡ್ಡು: ಸಿಎಸ್ ಅಲಪನ್ ನಿವೃತ್ತಿ ಬಳಿಕ ಮಮತಾ ಮುಖ್ಯ ಸಲಹೆಗಾರರಾಗಿ ನೇಮಕ!

06:14 PM May 31, 2021 | Nagendra Trasi |

ನವದೆಹಲಿ: ಪಶ್ಚಿಮಬಂಗಾಳ ಮತ್ತು ಕೇಂದ್ರ ಸರ್ಕಾರದ ನಡುವೆ ಜಟಾಪಟಿ ಮುಂದುವರಿದಿರುವ ನಡುವೆಯೇ ಪಶ್ಚಿಮಬಂಗಾಳದ ಮುಖ್ಯಕಾರ್ಯದರ್ಶಿ ಅಲಪನ್ ಬಂಡೋಪಾಧ್ಯಾಯ ಅವರು ತಮ್ಮ ಹುದ್ದೆಯಿಂದ ನಿವೃತ್ತರಾಗಿದ್ದು, ಈ ಸಂದರ್ಭದಲ್ಲಿಯೇ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಮುಖ್ಯಸಲಹೆಗಾರರಾಗಿ ಸೋಮವಾರ (ಮೇ 31) ನೇಮಕಗೊಂಡಿದ್ದಾರೆ.

Advertisement

ಅಲಪನ್ ಬಂಡೋಪಾಧ್ಯಾಯ ಅವರನ್ನು ಮುಂದಿನ ಮೂರು ವರ್ಷಗಳ ಕಾಲ ಮುಖ್ಯ ಸಲಹೆಗಾರರನ್ನಾಗಿ ನೇಮಕ ಮಾಡಿಕೊಳ್ಳಲಾಗಿದೆ ಎಂದು ಮಮತಾ ಬ್ಯಾನರ್ಜಿ ಸುದ್ದಗೋಷ್ಠಿಯಲ್ಲಿ ಘೋಷಿಸಿದ್ದಾರೆ. ಏತನ್ಮಧ್ಯೆ ಎಚ್ ಕೆ ದ್ವಿವೇದಿ ಅವರನ್ನು ರಾಜ್ಯದ ಮುಖ್ಯ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಕೋವಿಡ್ 19 ಬಿಕ್ಕಟ್ಟಿನ ವಿರುದ್ಧ ಹೋರಾಡುತ್ತಿರುವ ಸಂದರ್ಭದಲ್ಲಿ ರಾಜ್ಯದ ಮುಖ್ಯ ಕಾರ್ಯದರ್ಶಿ ಅಲಪನ್ ಬಂಡೋಪಾಧ್ಯಾಯ ಅವರನ್ನು ಕೇಂದ್ರದ ಸೇವೆಗೆ ಕಳುಹಿಸಿಕೊಡಲಾಗದು. ಅಲ್ಲದೇ ಈ ಏಕಪಕ್ಷೀಯ ಆದೇಶ ಆಘಾತ ಮತ್ತು ಆಘಾತವನ್ನು ತಂದೊಡ್ಡಿದೆ ಎಂದು ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದರು.

ಶುಕ್ರವಾರ ಮಮತಾ ಬ್ಯಾನರ್ಜಿ ಮತ್ತು ಬಂಡೋಪಾಧ್ಯಾಯ ಬಂಗಾಳಕ್ಕೆ ಭೇಟಿ ನೀಡಿದ್ದ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿ ಯಸ್ ಚಂಡಮಾರುತದಿಂದ ಸಂಭವಿಸಿದ ಹಾನಿ ಕುರಿತ ವರದಿಯನ್ನು ನೀಡಿದ್ದರು. ನಂತರ ನಡೆದ ಪುನರ್ ಪರಿಶೀಲನಾ ಸಭೆಗೆ ಇಬ್ಬರು ಗೈರು ಹಾಜರಾಗಿದ್ದರು. ಈ ಘಟನೆ ನಂತರ ಬಂಗಾಳದ ಮುಖ್ಯ ಕಾರ್ಯದರ್ಶಿಯನ್ನು ವಾಪಸ್ ಕರೆಯಿಸಿಕೊಳ್ಳುವುದಾಗಿ ತಿಳಿಸಿ, ಸಿಬ್ಬಂದಿ ಮತ್ತು ತರಬೇತಿ ಇಲಾಖೆಗೆ ಮೇ 31ಎಂದು ವರದಿ ಮಾಡಿಕೊಳ್ಳಬೇಕು ಎಂದು ಬಂಡೋಪಾಧ್ಯಾಯ ಅವರಿಗೆ ಕೇಂದ್ರ ಸರ್ಕಾರ ಸೂಚಿಸಿತ್ತು.

Advertisement

Udayavani is now on Telegram. Click here to join our channel and stay updated with the latest news.

Next