Advertisement

ಅಲೆವೂರು ಗ್ರಾಮ ಪಂಚಾಯತ್ ಸದಸ್ಯ ಪ್ರವೀಣ್ ಶೆಟ್ಟಿ ಕೊರಂಗ್ರಪಾಡಿ ನಿಧನ

10:27 PM Dec 25, 2021 | Team Udayavani |

ಕಟಪಾಡಿ: ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ (ಉತ್ತರ ವಲಯ) ಅಧ್ಯಕ್ಷ ಪ್ರವೀಣ್ ಶೆಟ್ಟಿ ಕೊರಂಗ್ರಪಾಡಿ (52) ಅವರು ಅಲ್ಪ ಕಾಲದ ಅಸೌಖ್ಯದಿಂದ ಶನಿವಾರ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

Advertisement

ಮೃತರು ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ ಮತ್ತು ಅಪಾರt ಬಂಧು ಬಳಗವನ್ನಗಲಿದ್ದಾರೆ.

ಕೊರಂಗ್ರಪಾಡಿ ಸಹಕಾರಿ ವ್ಯವಸಾಯಿಕ  ಸಂಘದ ಅಧ್ಯಕ್ಷರಾಗಿ,  ಅಲೆವೂರು ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷರು, ಹಾಲಿ ಸದಸ್ಯರಾಗಿದ್ದರು.ಕಾಪು ಬ್ಲಾಕ್ ಕಾಂಗ್ರೆಸ್ ಉತ್ತರ ವಲಯ ಅಧ್ಯಕ್ಷರಾಗಿದ್ದರು.

ಮಾಜಿ ಉಡುಪಿ ತಾ.ಪಂ. ಸದಸ್ಯರಾಗಿ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದರು‌.ಉದ್ಯಾವರ ಕೇದಾರ್ ಬ್ರಹ್ಮ್ eಶ್ವರ ಮಹಾಲಿಂಗೇಶ್ವರ ದೇಗುಲದ ಜೀರ್ನೋದ್ಧಾರ ಸಮಿತಿ ಅಧ್ಯಕ್ಷರಾಗಿ, ಕೊರಂಗ್ರಪಾಡಿ ವಿಷ್ಣುಮೂರ್ತಿ ಭಜನಾ ಮಂಡಳಿ ಮಾಜಿ ಅಧ್ಯಕ್ಷ, ಸಮೂಹ ಮಿತ್ರರು ಮಾಜಿ ಅಧ್ಯಕ್ಷ, ವಿವಿಧ ದೈವಸ್ಥಾನಗಳ ಜೀರ್ಣದ್ದಾರ ಸಮಿತಿಗಳ ಪ್ರಮುಖರಾಗಿ ಸೇವೆ ಸಲ್ಲಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next