Advertisement

ಸಂತೆ ಗಲಾಟೆಯಲ್ಲೇ ಪರೀಕ್ಷೆ

07:00 PM Jun 29, 2020 | Naveen |

ಆಲ್ದೂರು: ಪಟ್ಟಣದ ಸಂತೆ ಮೈದಾನದಲ್ಲಿ ಸಂತೆ ನಡೆಸಲು ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದರಿಂದ ಶನಿವಾರ ಪಟ್ಟಣದ ಮುಖ್ಯರಸ್ತೆಯ ಬದಿಯಲ್ಲೇ ಸಂತೆ ಬಿರುಸಿನಿಂದ ನಡೆದಿದ್ದು, ಸಂತೆ ಗಲಾಟೆ ಮಧ್ಯೆಯೇ ಎಸ್‌ಎಸ್‌ ಎಲ್‌ಸಿ ವಿದ್ಯಾರ್ಥಿಗಳು ಗಣಿತ ಪರೀಕ್ಷೆ ಬರೆಯುವ ಸ್ಥಿತಿ ನಿರ್ಮಾಣವಾಗಿತ್ತು.

Advertisement

ಆಲ್ದೂರಿನಲ್ಲಿ ಪ್ರತಿ ಶನಿವಾರ ಸಂತೆ ನಡೆಯುತ್ತದೆ. ಆದರೆ ಕೋವಿಡ್‌ -19 ವೈರಸ್‌ ಹಿನ್ನೆಲೆಯಲ್ಲಿ ಸರ್ಕಾರ ರಾಜ್ಯಾದ್ಯಂತ ಸಂತೆಗಳನ್ನು ರದ್ದು ಮಾಡಿ ಆದೇಶ ಹೊರಡಿಸಿತ್ತು. ಆದರೂ ಪ್ರತಿ ಶನಿವಾರ ಪಟ್ಟಣದಲ್ಲಿ ಸಂತೆ ನಡೆಯುತ್ತಿದೆ. ಈ ವಾರ ತರಕಾರಿ ಮಾರಾಟ ಮಾಡಲು ಪಟ್ಟಣಕ್ಕೆ ನೂರಾರು ವಾಹನಗಳು ಬಂದ ಹಿನ್ನೆಲೆಯಲ್ಲಿ ಸಂತೆ ನಡೆಯುವ ಆಲ್ದೂರಿನ ಸಂತೆ ಮೈದಾನದ ವಾಸಿಗಳು ವಾಹನಗಳನ್ನು ತಡೆದು ವಾಪಸ್‌ ಕಳುಹಿಸಿದ್ದಾರೆ. ಮುಖ್ಯ ರಸ್ತೆಯ ಎರಡು ಬದಿಗಳಲ್ಲಿ ಅಂಗಡಿಗಳನ್ನು ಹಾಕಿಕೊಂಡು ವ್ಯಾಪಾರ ನಡೆಸುತ್ತಿದ್ದ ಕಾರಣ ಪಟ್ಟಣದಲ್ಲಿ ಜನ ಜಂಗುಳಿ ಹೆಚ್ಚಾಗಿತ್ತು. ಸಂತೆಯ ಗಲಾಟೆ ನಡುವೆಯೇ ಎಸ್‌ಎಸ್‌ ಎಲ್‌ಸಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಬೇಕಾಯಿತು.

Advertisement

Udayavani is now on Telegram. Click here to join our channel and stay updated with the latest news.

Next