Advertisement

ಎಲ್ಲಾ ಗಡಿಗಳನ್ನುಮುಚ್ಚಲಾಗಿದೆ

04:39 PM Mar 24, 2020 | Suhan S |

ಕೆಜಿಎಫ್: ಕೋವಿಡ್ 19 ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹೊರಡಿಸಿರುವ ಸೂಚನೆಯಂತೆ ಎಲ್ಲಾ ಗಡಿಗಳನ್ನು ಮುಚ್ಚಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎಂ.ಎಸ್‌.ಮಹಮದ್‌ ಸುಜೀತ ಹೇಳಿದ್ದಾರೆ.

Advertisement

ತಮಿಳುನಾಡಿಗೆ ಹೊಂದಿಕೊಂಡಿರುವ ಒಂದು ಗಡಿ ಮತ್ತು ಆಂಧ್ರ ಪ್ರದೇಶಕ್ಕೆ ಹೊಂದಿಕೊಂಡಿರುವ ಮೂರು ಗಡಿಗಳನ್ನು ತಕ್ಷಣವೇ ಮುಚ್ಚಲಾಗಿದೆ. ಕಂದಾಯ ಮತ್ತು ಆರೋಗ್ಯ ಇಲಾಖೆಯ ಸಿಬ್ಬಂದಿ ಸಹಕಾರದೊಂದಿಗೆ ಸರ್ಕಾರದ ಸೂಚನೆಯನ್ನು ಜಾರಿಗೆ ತರಲಾಗುವುದು ಎಂದರು. ಸಾರ್ವಜನಿಕರು ಮಾರಕ ರೋಗದ ಬಗ್ಗೆ ಎಚ್ಚರಿಕೆಯಿಂದ ಇರಬೇಕು. ನಾಲ್ಕು ಜನರಿಗಿಂತ ಹೆಚ್ಚು ಸೇರಬಾರದು. ಪ್ರಾರ್ಥನ ಮಂದಿರಗಳಲ್ಲಿ ಕೂಡ ಜನದಟ್ಟಣೆ ಇರಬಾರದು. ಹಬ್ಬವನ್ನು ಮನೆಯಲ್ಲಿಯೇ ಮಾಡಬೇಕು. ಸರ್ಕಾರದ ಆದೇಶವನ್ನು ಉಲ್ಲಂಘನೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next