Advertisement

ಶಾಸಕನಾಗಿ ಕ್ಷೇತ್ರಕ್ಕೆ ಸಕಲ ಸೌಲಭ್ಯ

11:56 AM May 11, 2018 | Team Udayavani |

ಬೆಂಗಳೂರು: ಮಲ್ಲೇಶ್ವರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್‌.ಅಶ್ವಥ್‌ನಾರಾಯಣ ಅವರು ಗುರುವಾರ ಬಿರುಸಿನ ಪ್ರಚಾರ ನಡೆಸಿ ಮತಯಾಚನೆ ಮಾಡಿದರು. ಕ್ಷೇತ್ರದ ವಿವಿಧೆಡೆ ರೋಡ್‌ ಶೋ ಹಾಗೂ ಪಾದಯಾತ್ರೆ ನಡೆಸಿದ ಅವರು, ಮತ್ತೂಮ್ಮೆ ಆಶೀರ್ವಾದ ಮಾಡುವಂತೆ ಕೋರಿದರು. ಹತ್ತು ವರ್ಷಗಳಲ್ಲಿ ಕ್ಷೇತ್ರದ ಶಾಸಕನಾಗಿ ರಸ್ತೆ, ಕುಡಿಯುವ ನೀರು, ಶೌಚಾಲಯ ನಿರ್ಮಾಣ, ಕ್ರೀಡಾಂಗಣ ನಿರ್ಮಾಣ, ಮೂಲಸೌಕರ್ಯ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸಿದ್ದೇನೆ ಎಂದು ಹೇಳಿದರು.

Advertisement

ಕ್ಷೇತ್ರದ ವ್ಯಾಪ್ತಿಗೆ ಬರುವ ಅರಮನೆ ನಗರ, ಮತ್ತೀಕೆರೆ, ಮಲ್ಲೇಶ್ವರ, ರಾಜಮಹಲ್‌ ಗುಟ್ಟಹಳ್ಳಿ, ಕಾಡುಮಲ್ಲೇಶ್ವರ, ಸುಬ್ರಹ್ಮಣ್ಯ ನಗರ, ಗಾಯಿತ್ರಿ ನಗರ ವಾರ್ಡ್‌ಗಳಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರು ಡಾ.ಸಿ.ಎನ್‌.ಅಶ್ವಥ್‌ನಾರಾಯಣ ಪರ ಮತಯಾಚನೆ ಮಾಡಿದರು. ಕ್ಷೇತ್ರದ ಜನತೆಯ ಸಮಸ್ಯೆಗೆ ಪ್ರಾಮಾಣಿಕವಾಗಿ ಸ್ಪಂದಿಸಿದ್ದು ಮತ್ತೂಮ್ಮೆ ಅವರ ಸೇವೆಗೆ  ಅವಕಾಶ ಕೊಡುವ ಭರವಸೆಯಿದೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next