Advertisement

Reservoir ಕಾವೇರಿ ಕಣಿವೆಯ ನಾಲ್ಕೂ ಜಲಾಶಯಗಳು ಭರ್ತಿ!

01:10 AM Jul 25, 2024 | Team Udayavani |

ಬೆಂಗಳೂರು: ಕೇರಳದ ವಯನಾಡು ಹಾಗೂ ಕಾವೇರಿ ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆ ಹಿನ್ನೆಲೆಯಲ್ಲಿ ಕಾವೇರಿ ಕಣಿವೆ ಜಿಲ್ಲೆಗಳ 4 ಪ್ರಮುಖ ಜಲಾಶಯಗಳು ಬಹುತೇಕ ಭರ್ತಿಯಾಗಿದ್ದು, ಅನ್ನದಾತರ ಮೊಗದಲ್ಲಿ ಸಂಭ್ರಮ ಮನೆ ಮಾಡಿದೆ. ಬುಧವಾರ ಕೆಆರ್‌ಎಸ್‌ ಮತ್ತು ಹೇಮಾವತಿ ಜಲಾಶಯಗಳು ಭರ್ತಿಯಾಗಿವೆ.

Advertisement

ಕೊಡಗು ಜಿಲ್ಲೆಯ ಹಾರಂಗಿ, ಮೈಸೂರು ಜಿಲ್ಲೆ ಎಚ್‌.ಡಿ. ಕೋಟೆ ತಾಲೂಕಿನ ಕಬಿನಿ, ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಕೆಆರ್‌ಎಸ್‌, ಹಾಸನ ಜಿಲ್ಲೆ ಗೊರೂರಿನ ಹೇಮಾವತಿ ಜಲಾಶಯಗಳು ಭರ್ತಿಯಾಗಿದ್ದು, ಜಲಾಶಯಗಳಿಂದ ನದಿ ಹಾಗೂ ಕಾಲುವೆಗಳಿಗೆ ಭಾರೀ ಪ್ರಮಾಣದಲ್ಲಿ ನೀರು ಹೊರಬಿಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ನೀರಾವರಿ ಇಲಾಖೆ, ಕೃಷಿ ಚಟುವಟಿಕೆಗಳು ಹಾಗೂ ಕೆರೆಗಳಿಗೆ ನೀರು ತುಂಬಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ.

ಯಾವ ಅಣೆಕಟ್ಟು , ಏನು ಸ್ಥಿತಿ?
-ಹೇಮಾವತಿ ಜಲಾಶಯ
ಬರೋಬ್ಬರಿ 2 ವರ್ಷಗಳ ಬಳಿಕ ಭರ್ತಿ
-ಜಲಾಶಯದಲ್ಲಿ ಪ್ರಸ್ತುತ 36.156 ಟಿಎಂಸಿ ನೀರು
-ಕಾವೇರಿ ಜಲಾನಯನ ವ್ಯಾಪ್ತಿಯಲ್ಲಿ ಉತ್ತಮ ಮಳೆ
-49.452 ಟಿಎಂಸಿ ಸಾಮರ್ಥ್ಯದ ಕೃಷ್ಣರಾಜಸಾಗರ ಜಲಾಶಯ ಭರ್ತಿ
-ಬುಧವಾರ ಸಂಜೆ ನೀರಿನ ಮಟ್ಟ
124.80 ಅಡಿಗೆ ಏರಿಕೆ

Advertisement

Udayavani is now on Telegram. Click here to join our channel and stay updated with the latest news.

Next