Advertisement

ಇಂದಿನಿಂದ ಸಹಕಾರ ಸಪ್ತಾಹ

07:05 AM Nov 14, 2017 | Team Udayavani |

ಬೆಳಗಾವಿ: ರಾಜ್ಯದಲ್ಲಿ ಮಂಗಳವಾರದಿಂದ ಒಂದು ವಾರದ ತನಕ ಅಖೀಲ ಭಾರತ 64 ನೇ ರಾಷ್ಟ್ರೀಯ ಸಹಕಾರ ಸಪ್ತಾಹ ನಡೆಯಲಿದೆ ಎಂದು ಸಹಕಾರ ಸಚಿವ ರಮೇಶ್‌ ಜಾರಕಿಹೊಳಿ ಹೇಳಿದ್ದಾರೆ.

Advertisement

ಸುವರ್ಣ ಸೌಧದಲ್ಲಿ ಸೊಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,  ಸಹಕಾರ ಕ್ಷೇತ್ರದ ಸಾಧನೆಗಳನ್ನು ಜನರಿಗೆ ತಿಳಿಸಲು ನವೆಂಬರ್‌ 14ರಿಂದ 20ರವರೆಗೆ ರಾಜ್ಯಾದ್ಯಂತ ಸಹಕಾರ ಸಪ್ತಾಹ ನಡೆಸಲಾಗುತ್ತಿದೆ. ದೇಶದ
ಪ್ರಥಮ ಪ್ರಧಾನಿ ಜವಾಹರಲಾಲ್‌ ನೆಹರು ಅವರ ಜನ್ಮದಿನದ ಅಂಗವಾಗಿ ಅವರಿಗೆ ಗೌರವ ಸಲ್ಲಿಸಲು ನ.14ರಂದು ಸಪ್ತಾಹಕ್ಕೆ ಚಾಲನೆ ನೀಡಲಾಗುತ್ತಿದೆ ಎಂದು ತಿಳಿಸಿದರು.

ಸಹಕಾರಿ ಸಂಸ್ಥೆಗಳನ್ನು ಗಣಕೀಕರಣಗೊಳಿಸುವ ಮೂಲಕ ಜನರನ್ನು ಸಬಲೀಕರಣಗೊಳಿಸುವುದು ಈ ಬಾರಿಯ ಸಹಕಾರ ಸಪ್ತಾಹದ ಧ್ಯೇಯವಾಗಿದೆ. ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಸಹಕಾರ ಸಪ್ತಾಹ ಉದ್ಘಾಟಿಸಲಿದ್ದು, ಮಂಗಳೂರು, ಕೋಲಾರ, ಬಾಗಲಕೋಟೆ,ತುಮಕೂರು, ಬೆಂಗಳೂರು ಮತ್ತು ರಾಯಚೂರಿನಲ್ಲಿ ಒಂದು ವಾರ ಕಾರ್ಯಕ್ರಮಗಳು ನಡೆಯಲಿವೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next