Advertisement

ಗಮನಿಸಿ: ಇಂದು ರಾಷ್ಟ್ರವ್ಯಾಪಿ ಬ್ಯಾಂಕ್‌ ಮುಷ್ಕರ

07:29 AM Oct 23, 2019 | keerthan |

ಹೊಸದಿಲ್ಲಿ : ಬ್ಯಾಂಕ್‌ ಗಳ ವಿಲೀನ, ನಿಗದಿತ ಠೇವಣಿ ಬಡ್ಡಿ ದರ ಇಳಿಕೆಗೆ ಖಂಡನೆ ಸಹಿತ ಹಲವು ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮಂಗಳವಾರ ರಾಷ್ಟ್ರ ವ್ಯಾಪಿ ಬ್ಯಾಂಕ್‌ ಮುಷ್ಕರ ನಡೆಯಲಿದೆ.

Advertisement

ಅಖಿಲ ಭಾರತ ಬ್ಯಾಂಕ್‌ ಉದ್ಯೋಗಿಗಳ ಸಂಘ, ಭಾರತೀಯ ಬ್ಯಾಂಕ್‌ ಉದ್ಯೋಗಿಗಳ ಸಂಘಟನೆ ಮುಷ್ಕರಕ್ಕೆ ಕರೆ ನೀಡಿವೆ. ಇದರ ಜತೆಗೆ ಬ್ಯಾಂಕಿಂಗ್‌ ಕ್ಷೇತ್ರದ ಕೆಲವೊಂದು ಉದ್ಯೋಗಗಳನ್ನು ಹೊರ ಗುತ್ತಿಗೆ ನೀಡುವುದಕ್ಕೂ ಸಂಘಟನೆಗಳು ವಿರೋಧ ಮಾಡಿವೆ. ಮುಷ್ಕರದಲ್ಲಿ ಆರ್‌ ಬಿಐ ಹಾಗೂ ಎಸ್‌ಬಿಐ ಭಾಗವಹಿಸುವುದಿಲ್ಲ ಎಂದು ಸ್ಪಷ್ಟನೆ ನೀಡಿವೆ.

ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌, ಸಹಕಾರ ಬ್ಯಾಂಕ್‌ಗಳು ಕೂಡ ದೂರ ಉಳಿಯಲಿವೆ. ಬ್ಯಾಂಕ್‌ ಆಫ್ ಮಹಾರಾಷ್ಟ್ರ, ಸಿಂಡ್‌ ಬ್ಯಾಂಕ್‌, ಬ್ಯಾಂಕ್‌ ಆಫ್ ಬರೋಡಾಗಳು ಗ್ರಾಹಕರಿಗೆ ಸೇವೆ ಒದಗಿಸುವಲ್ಲಿ ಅಡಚಣೆಯಾಗುವ ಸಾಧ್ಯತೆಯಿದೆ ಎಂದಿವೆ.

Advertisement

Udayavani is now on Telegram. Click here to join our channel and stay updated with the latest news.

Next