Advertisement

ದೇಶವ್ಯಾಪಿ ವೈದ್ಯರ ಮುಷ್ಕರ; ಕಿಮ್ಸ್, ನಿಮ್ಹಾನ್ಸ್ ಮುಂದೆ ರೋಗಿಗಳ ಪರದಾಟ

09:13 AM Jun 18, 2019 | Team Udayavani |

ಬೆಂಗಳೂರು: ವೈದ್ಯರ ಮೇಲಿನ ಹಲ್ಲೆ ಖಂಡಿಸಿ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಭಾರತೀಯ ವೈದ್ಯಕೀಯ ಸಂಸ್ಥೆ(ಐಎಂಎ) ಕರೆ ನೀಡಿರುವ ದೇಶವ್ಯಾಪಿ ಮುಷ್ಕರದ ಕರೆಗೆ ಬೆಂಗಳೂರು, ಗದಗ, ಹುಬ್ಬಳ್ಳಿ, ಹಾಸನ ಸೇರಿದಂತೆ ರಾಜ್ಯದ ಹಲವೆಡೆ ವೈದ್ಯರು ಮುಷ್ಕರದಲ್ಲಿ ಭಾಗಿಯಾಗಿದ್ದ ಹಿನ್ನೆಲೆಯಲ್ಲಿ ರೋಗಿಗಳು ಪರದಾಡುವಂತಾಗಿದೆ.

Advertisement

ಬೆಂಗಳೂರಿನ ನಿಮ್ಹಾನ್ಸ್ ಹಾಗೂ ಕಿಮ್ಸ್ ಆಸ್ಪತ್ರೆಯ ವೈದ್ಯರು ಸೇವೆಗೆ ಗೈರು ಹಾಜರಾಗಿದ್ದರಿಂದ ರೋಗಿಗಳು ಪರದಾಡುವಂತಾಗಿದೆ. ದೂರದ ಊರಿನಿಂದ ಬಂದ ರೋಗಿಗಳು ವೈದ್ಯರ ಪ್ರತಿಭಟನೆಯಿಂದಾಗಿ ತೊಂದರೆ ಅನುಭವಿಸುವಂತಾಗಿದೆ ಎಂದು ಆರೋಪಿಸಿದ್ದಾರೆ.

ಪಶ್ಚಿಮಬಂಗಾಳದಲ್ಲಿ ವೈದ್ಯರ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿ ಐಎಂಎ ಸೋಮವಾರ ದೇಶಾದ್ಯಂತ ತುರ್ತು ಸೇವೆಯನ್ನು ಹೊರತುಪಡಿಸಿ ಒಪಿಡಿ ಸೇರಿದಂತೆ ಎಲ್ಲಾ ಪ್ರಮುಖ ಸೇವೆಯನ್ನು ಸ್ಥಗಿತಗೊಳಿಸಿ ಮುಷ್ಕರ ನಡೆಸುವಂತೆ ಕರೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿಯೂ ವೈದ್ಯರು ಮುಷ್ಕರಕ್ಕೆ ಬೆಂಬಲ ಘೋಷಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next