Advertisement

ಅಖೀಲ ಭಾರತ ಹಿಂದೂ ಸಭಾ ಕಣಕ್ಕೆ

07:05 AM Apr 17, 2018 | Team Udayavani |

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಅಖೀಲ ಭಾರತ ಹಿಂದೂ ಮಹಾ ಸಭಾ, ಸಂಪೂರ್ಣ ಭಾರತ ಕ್ರಾಂತಿ ಪಕ್ಷದ ಜತೆಗೂಡಿ ಕಣಕ್ಕಿಳಿಯಲು ನಿರ್ಧರಿಸಿದ್ದು, 45 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಿದೆ.

Advertisement

ನಗರದಲ್ಲಿ ಸೋಮವಾರ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೊಳಿಸಿ ಮಾತನಾಡಿದ ಮಹಾಸಭಾದ ರಾಜ್ಯಾಧ್ಯಕ್ಷ ಸುಬ್ರಹ್ಮಣ್ಯ ರಾಜ್‌, ಕಾಂಗ್ರೆಸ್‌ ಪಕ್ಷದಂತೆ ಬಿಜೆಪಿ ಕೂಡ ಭ್ರಷ್ಟಾಚಾರ ಮೆತ್ತಿಕೊಂಡಿದೆ. ಈ ಹಿನ್ನೆಲೆಯಲ್ಲಿ ಅಖೀಲ ಭಾರತ ಮಹಾಸಭಾ ಚುನಾವಣಾ ಅಖಾಡಕ್ಕಿಳಿಯಲು ತೀರ್ಮಾನ ಕೈಗೊಂಡಿದೆ ಎಂದರು.

ದೇಶವನ್ನು ಭ್ರಷ್ಟಾಚಾರ ಮತ್ತು ಭಯೋತ್ಪಾಧನೆ ಮುಕ್ತ ಮಾಡುವುದು ಮಹಾಸಭಾ ಮತ್ತು ಸಂಪೂರ್ಣ ಭಾರತ ಕ್ರಾಂತಿ ಪಕ್ಷದ ಗುರಿಯಾಗಿದ್ದು, ಈ ನಿಟ್ಟಿನಲ್ಲಿ ಪ್ರಚಾರ ನಡೆಸಲಾಗುವುದು. ಬಿಜೆಪಿ ಹಿಂದುತ್ವವನ್ನು ಮರೆತಿದ್ದು, ಜಾತಿಯನ್ನು ಒಡೆದಾಳುತ್ತಿದೆ. ರಾಮಮಂದಿರ ವಿಚಾರವನ್ನು ಬದಿಗೊತ್ತಿ ರಾಜಕೀಯ ಮಾಡುತ್ತಿದೆ ಎಂದು ದೂರಿದರು.

Advertisement

Udayavani is now on Telegram. Click here to join our channel and stay updated with the latest news.

Next