Advertisement
ನ. 18ರಂದು ಘಾಟ್ಕೋಪರ್ ಪೂರ್ವದ ಜವೇರಿಬೆನ್ ಪೋಪಟ್ಲಾಲ್ ಸಭಾಗೃಹದಲ್ಲಿ ಅಖೀಲ ಭಾರತ ಅಯ್ಯಪ್ಪ ಸೇವಾ ಸಂಘ ಮುಂಬಯಿ ಇದರ ದಶಮಾನೋತ್ಸವ ಸಂಭ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಇವರು, ಹಿರಿಯರ ನಂಬಿಕೆಯ ಧರ್ಮಕ್ಕೆ ಮಹತ್ವ ನೀಡುವ ಸಂಸ್ಕಾರ ನಮ್ಮದು. ಆ ಮೂಲಕ ಆಡಂಬರವಿಲ್ಲದ ಭಕ್ತಿಯ ಆಚರಣೆಗೆ ಮಹತ್ವ ನೀಡುವ ಮೂಲಕ ನಮ್ಮ ಆಚಾರ, ವಿಚಾರಗಳಿಗೆ ಮಹತ್ವ ನೀಡಿ ಧಾರ್ಮಿಕತೆಗೆ ಒತ್ತು ನೀಡುವ ಈ ಧಾರ್ಮಿಕ ಸಂಸ್ಥೆಯಿಂದ ಇನ್ನಷ್ಟು ಸಮಾಜ ಸೇವೆ, ಆರೋಗ್ಯ, ಶೈಕ್ಷಣಿಕ ಕಾರ್ಯಕ್ರಮಗಳು ಸದಾ ನಡೆಯುತ್ತಿರಲಿ ಎಂದರು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟÅ ಅಧ್ಯಕ್ಷ ಚಂದ್ರಶೇಖರ ಪಾಲೆತ್ತಾಡಿ ಇವರು ಮಾತನಾಡಿ, ಧಾರ್ಮಿಕ ಸಮಾನತೆಯ ಬಗ್ಗೆ ಚಿಂತಿಸುವ ನಾವು ಕಟ್ಟುಪಾಡುಗಳ ಬಗ್ಗೆ ಮಾತನಾಡುತ್ತೇವೆ. ಧಾರ್ಮಿಕ ಚಿಂತನೆಯಲ್ಲಿ ಕಟ್ಟುಪಾಡು, ಅನ್ಯಾಯ, ಅನಾಚಾರ, ರಕ್ತಪಾತ ತಪ್ಪು. ಹಸಿವಿನ ಹಿಂದಿನ ಒಂದು ಮಹತ್ವದ ಕೆಲಸವೆಂದರೆ ಅದು ಅನ್ನದಾನ. ಪ್ರತಿಯೋರ್ವ ವ್ಯಕ್ತಿಗೂ ಹಸಿವಿನಲ್ಲಿ ನೆಮ್ಮದಿ ದೊರೆಯುತ್ತದೆ. ಇಂತಹ ಅನ್ನದಾನ ಸೇವೆ ಈ ಸಂಸ್ಥೆಯಿಂದ ನಡೆಯುತ್ತಿರುವುದು ಅಭಿನಂದನೀಯ ಎಂದರು.
ಅಧ್ಯಕ್ಷತೆ ವಹಿಸಿದ್ದ ಪದ್ಮನಾಭ ಎಸ್. ಪಯ್ಯಡೆ ಇವರು ಕಲಶದಲ್ಲಿರಿಸಿದ ತೆಂಗಿನ ಹಿಂಗಾರವನ್ನು ಅರಳಿಸುವ ಮೂಲಕ ಧಾರ್ಮಿಕ ಸಭಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರನ್ನು ಗಣ್ಯರ ಸಮ್ಮುಖದಲ್ಲಿ ಸಮ್ಮಾನಿಸಲಾಯಿತು.
Related Articles
Advertisement
ಉದ್ಯಮಿಗಳಾದ ಗೋಪಾಲ ಪುತ್ರನ್, ಬಂಟರ ಸಂಘ ಮುಂಬಯಿ ಮಾಜಿ ಅಧ್ಯಕ್ಷ ಆರ್. ಸಿ. ಶೆಟ್ಟಿ, ಸಂಜೀವ ಶೆಟ್ಟಿ, ಸುರೇಶ್ ಶೆಟ್ಟಿ ಶಿಬರೂರು, ನವೀನ್ ಚಂದ್ರ ಸನಿಲ್, ಜಯಪ್ರಕಾಶ್ ಶೆಟ್ಟಿ, ಶ್ರೀನಿವಾಸ ಗುರುಸ್ವಾಮಿ, ಜೊತೆ ಕೋಶಾಧಿಕಾರಿ ಸುರೇಶ್ ಪಾಟ್ಕರ್, ರವೀಂದ್ರನಾಥ ಭಂಡಾರಿ ವೇದಿಕೆಯಲ್ಲಿ ಅತಿಥಿಗಳಾಗಿ ಶುಭಹಾರೈಸಿದರು.
ಸಾಂಸ್ಕೃತಿಕ ಕಾರ್ಯಕ್ರಮವಾಗಿ ಶಾರದಾ ಆರ್ಟ್ಸ್ ತಂಡದ ಐಸಿರಿ ಕಲಾವಿದರಿಂದ ನವೀಲ್ ಡಿ. ಪಡೀಲ್ ನಿರ್ದೇಶನ, ಸುಂದರ್ ರೈ ಮಂದಾರ ಅಭಿನಯದ ಬಂಜಿಗ್ ಹಾಕೊಡಿc ನಾಟಕ ಪ್ರದರ್ಶನಗೊಂಡಿತು. ಸಂಸ್ಥೆಗೆ ಸಹಕಾರ ನೀಡಿದ ದಾನಿಗಳನ್ನು, ಗಣ್ಯರನ್ನು ಗೌರವಿಸಲಾಯಿತು. ಅಶೋಕ್ ಪಕ್ಕಳ ಸ್ವಾಗತಿಸಿ, ಸಮ್ಮಾನ ಪತ್ರ ವಾಚಿಸಿ, ಕಾರ್ಯಕ್ರಮ ನಿರ್ವಹಿಸಿದರು. ಜತೆ ಕಾರ್ಯದರ್ಶಿ ಸಂತೋಷ್ ಕೆ. ಪೂಜಾರಿ ವಂದಿಸಿದರು. ಅನ್ನಸಂತರ್ಪಣೆ ನಡೆಯಿತು. ಕಲಾಭಿಮಾನಿಗಳು ಅಧಿಕ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.
ಸಂಸ್ಥೆಯು ಕಳೆದ ಹತ್ತು ವರ್ಷಗಳಿಂದ ಹಿರಿಯ ಗುರುಸ್ವಾಮಿ ಶ್ರೀನಿವಾಸ್ ಅವರ ಮಾರ್ಗದರ್ಶನದಿಂದ ಹಲವಾರು ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸುವುದರ ಜತೆಗೆ ಪ್ರತೀ ವರ್ಷ ನಾಟಕ ಪ್ರದರ್ಶನವನ್ನು ಆಯೋಜಿಸಿ ಊರಿನ ಕಲಾವಿದರಿಗೆ ವೇದಿಕೆಯನ್ನು ಕಲ್ಪಿಸಿಕೊಡುತ್ತಿದೆ. ಅನ್ನದಾನ, ಶೈಕ್ಷಣಿಕ ನೆರವು, ವೈದ್ಯಕೀಯ ಇನ್ನಿತರ ಸಾಮಾಜಿಕ, ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಿ ಎಲ್ಲರ ಪ್ರಶಂಸೆಗೆ ಸಂಸ್ಥೆಯು ಪಾತ್ರವಾಗಿದೆ. ಆರ್ಥಿಕವಾಗಿ ಹಿಂದುಳಿದ ಅಯ್ಯಪ್ಪ ವ್ರತಧಾರಿಗಳನ್ನು ಶಬರಿಮಲೆ ಯಾತ್ರೆಗಳಿಗೆ ಉಚಿತವಾಗಿ ಕರೆದೊಯ್ಯುವ ಕಾರ್ಯವನ್ನು ಸಂಸ್ಥೆಯ ಮಾಡುತ್ತಿದೆ. ಇದರ ಸದುಪಯೋಗವನ್ನು ವ್ರತಧಾರಿಗಳು ಪಡೆದುಕೊಳ್ಳಬಹುದು. ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದವರನ್ನು ಗುರುತಿಸಿ ಗೌರವಿಸುವ ಕಾರ್ಯದಲ್ಲೂ ಸಂಸ್ಥೆಯು ತೊಡಗಿದೆ. ಸಂಸ್ಥೆಯ ಸಮಾಜಪರ ಕಾರ್ಯಗಳಿಗೆ ಎಲ್ಲರ ಸಹಕಾರ ಸದಾಯಿರಲಿೆ.ಉದಯ ಎಲ್. ಶೆಟ್ಟಿ ಪೇಜಾವರ,
ಅಧ್ಯಕ್ಷರು, ಅಖೀಲ ಭಾರತ ಅಯ್ಯಪ್ಪ ಸೇವಾ ಸಂಘ ಮುಂಬಯಿ ಚಿತ್ರ-ವರದಿ : ರಮೇಶ್ ಉದ್ಯಾವರ