Advertisement

Udupi ಅಧ್ಯಕ್ಷರಾಗಿ ಡಾ| ಕೃಷ್ಣಪ್ರಸಾದ್‌ ಕೂಡ್ಲು ಅಧಿಕಾರ ಸ್ವೀಕಾರ

12:20 AM Nov 02, 2023 | Team Udayavani |

ಉಡುಪಿ: ಬೆಂಗಳೂರಿನ ಎಂ.ಎಸ್‌. ರಾಮಯ್ಯ ಮೆಡಿಕಲ್‌ ಕಾಲೇಜಿನಲ್ಲಿ ರವಿವಾರ ನಡೆದ 42ನೇ ಅಖಿಲ ಕರ್ನಾಟಕ ಕಣ್ಣಿನ ತಜ್ಞರ ಸಮ್ಮೇಳನದಲ್ಲಿ ಪ್ರಸಾದ್‌ ನೇತ್ರಾಲಯ ಸೂಪರ್‌ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ನೇತ್ರತಜ್ಞ ಡಾ| ಕೃಷ್ಣಪ್ರಸಾದ್‌ ಕೂಡ್ಲು ಅವರು ಅಖಿಲ ಕರ್ನಾಟಕ ಕಣ್ಣಿನ ತಜ್ಞರ ಸಂಘದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರು.

Advertisement

ಕಣ್ಣಿನ ತಜ್ಞರಾದ ಡಾ| ಹೇಮಂತ್‌ ಮೂರ್ತಿಯವರು ಡಾ| ಕೃಷ್ಣಪ್ರಸಾದ್‌ ಅವರಿಗೆ ಅಧಿಕಾರ ಹಸ್ತಾಂತರಿಸಿ, ಡಾ| ಕೃಷ್ಣಪ್ರಸಾದ್‌ ಅವರು ನಿರಂತರವಾಗಿ ಸಮಾಜಮುಖೀ ಚಟುವಟಿಕೆಗಳನ್ನು ಮಾಡುತ್ತಾ, ಜನಸಾಮಾನ್ಯರಿಗೆ ಅನುಕೂಲವಾಗುವ ಕಣ್ಣಿನ ಉಚಿತ ತಪಾಸಣೆ ಶಿಬಿರಗಳನ್ನು ಆಯೋಜಿಸಿಕೊಂಡು ಬರುತ್ತಿದ್ದಾರೆ. ಅವರು ಈಗಾಗಲೇ ಅಖಿಲ ಕರ್ನಾಟಕ ಕಣ್ಣಿನ ತಜ್ಞರ ವೈಜ್ಞಾನಿಕ ಸಮಿತಿ ಸಮಿತಿ ಅಧ್ಯಕ್ಷರಾಗಿ 2 ವರ್ಷಗಳ ಕಾಲ ಹಾಗೂ ಕಾರ್ಯದರ್ಶಿಯಾಗಿ 5 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಅಖಿಲ ಭಾರತ ಕಣ್ಣಿನ ತಜ್ಞರ ಸಂಘದ ಪ್ರಸ್ತುತ ಎಡಿಟರ್‌ ಪ್ರೊಸಿಡಿಂಗ್‌ ಆಗಿ ಹಾಗೂ ರಾಜ್ಯ ಸರಕಾರದ ಯಶಸ್ವಿನಿ ಆರೋಗ್ಯ ಟ್ರಸ್ಟ್‌ನ ಟ್ರಸ್ಟಿಯಾಗಿ ಕಾರ್ಯನಿರ್ವಹಿಸುತ್ತಿ ದ್ದಾರೆ ಎಂದು ಶುಭ ಹಾರೈಸಿದರು.

ಅಧಿಕಾರ ಸ್ವೀಕರಿಸಿದ ಡಾ| ಕೃಷ್ಣಪ್ರಸಾದ್‌ ಮಾತನಾಡಿ, ರಾಜ್ಯಾದ್ಯಂತ ಎಲ್ಲ ಜಿಲ್ಲೆಗಳಲ್ಲಿರುವ ಕಣ್ಣಿನ ತಜ್ಞರೊಂದಿಗೆ ಸಮಾಲೋಚನೆ ನಡೆಸಿ ಅವರ ಸಮಸ್ಯೆಗಳನ್ನು ಆಲಿಸಿ ಪರಿಹರಿಸುವ ಹಾಗೂ ಸರಕಾರದ ಎಲ್ಲ ಯೋಜನೆಗಳಲ್ಲಿ ಕಣ್ಣಿನ ತಜ್ಞರನ್ನು ತೊಡಗಿಸಿಕೊಳ್ಳುವ ಮಹತ್ವಾಕಾಂಕ್ಷೆಯನ್ನು ಹೊಂದಿದ್ದೇನೆ ಎಂದು ಅವರು ತಿಳಿಸಿದರು.

ನಿವೃತ್ತ ಲೋಕಾಯುಕ್ತ ನ್ಯಾ| ಸಂತೋಷ್‌ ಹೆಗ್ಡೆ, ಅಖಿಲ ಕರ್ನಾಟಕ ಕಣ್ಣಿನ ತಜ್ಞರ ಸಂಘದ ಸದಸ್ಯರು ಉಪಸ್ಥಿತರಿದ್ದರು.

 

Advertisement
Advertisement

Udayavani is now on Telegram. Click here to join our channel and stay updated with the latest news.

Next