Advertisement

ಕೋವಿಡ್ ನಿಯಂತ್ರಣಕ್ಕೆ ಸಕಲ ಕ್ರಮ: ಸಿಎಂ ಬೊಮ್ಮಾಯಿ

02:33 PM Dec 24, 2022 | Team Udayavani |

ಹುಬ್ಬಳ್ಳಿ: ಕೋವಿಡ್ ನಿಯಂತ್ರಣ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಆರೋಗ್ಯ ಕ್ಷೇತ್ರದ ಮೂಲಭೂತ ಸೌಲಭ್ಯ, ಆಸ್ಪತ್ರೆ ಸಲಕರಣೆ, ಔಷಧ, ಆಕ್ಸಿಜನ್ ಘಟಕಗಳು ಕೊರತೆಯಾಗದಂತೆ ಕ್ರಮ ಕೈಗೊಳ್ಳಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಿಗೆ ಸೂಚಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

Advertisement

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ನಿಯಂತ್ರಣ ಮುಂಜಾಗ್ರತಾ ಕ್ರಮವಾಗಿ ಎರಡು ಸಭೆಗಳನ್ನು ನಡೆಸಿ ಅಗತ್ಯ ಸೂಚನೆಗಳನ್ನು ನೀಡಿದ್ದೇನೆ. ರವಿವಾರ ಕಂದಾಯ ಮತ್ತು ಆರೋಗ್ಯ ಸಚಿವರು ಸಭೆ ನಡೆಸಲಿದ್ದಾರೆ. ಬೂಸ್ಟರ್ ಡೋಸ್ ನೀಡಿಕೆ, ಪರೀಕ್ಷೆ ಹೆಚ್ಚಳಕ್ಕೆ ಸೂಚಿಸಿದ್ದೇನೆ, ಮುಖ್ಯವಾಗಿ ಲಸಿಕೆ ಕೊರತೆ ಆಗದಂತೆ ನೋಡಿಕೊಳ್ಳಲು ಹಾಗೂ ಪರಿಸ್ಥಿತಿ ಬಗ್ಗೆ ನಿಗಾವಹಿಸಲು ತಿಳಿಸಿದ್ದೇನೆ. ಮಾಸ್ಕ್ ಧರಿಸುವ ನಿಟ್ಟಿನಲ್ಲಿ ಜಾಗೃತಿ, ಕಡ್ಡಾಯ ಕ್ರಮ ಕೈಗೊಳ್ಳಲಾಗುತ್ತದೆ. ಸದ್ಯಕ್ಕೆ ಗಾಬರಿಯಾಗುವ ಸ್ಥಿತಿ ಇಲ್ಲ ಆದರೆ ಮುಂಜಾಗ್ರತಾ ಕ್ರಮಕ್ಕೆ ಮುಂದಾಗಿದ್ದೇವೆ ಎಂದರು.

ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಸಮಸ್ಯೆಗಳು, ನೀರಾವರಿ ಯೋಜನೆಗಳ ಕುರಿತು ಚರ್ಚೆ ಅವಕಾಶ ನೀಡುವಂತೆ ಎರಡು ಸದನಗಳ ಮುಖ್ಯಸ್ಥರಿಗೆ ಮನವಿ ಮಾಡಿದ್ದೇನೆ. ಸೋಮವಾರ ಅಥವಾ ಮಂಗಳವಾರ ಚರ್ಚೆಗೆ ಅವಕಾಶ ನೀಡುವ ಸಾಧ್ಯತೆ ಇದೆ ಎಂದರು.

ಇದನ್ನೂ ಓದಿ:ಈ ದೇಶಗಳಿಂದ ಭಾರತಕ್ಕೆ ಬಂದವರಿಗೆ RT-PCR ಕಡ್ಡಾಯ: ಕೇಂದ್ರ ಸರಕಾರ

ಅವಧಿಗೆ ಮುನ್ನ ಚುನಾವಣೆಯ ಚಿಂತನೆ ಸರಕಾರ, ಪಕ್ಷದ ಮಟ್ಟದಲ್ಲಿ ಇಲ್ಲವೇ ಇಲ್ಲ. ನಮ್ಮ ಸಾಧನೆಗಳ ರಿಪೋರ್ಟ್ ಕಾರ್ಡ್ ನೊಂದಿಗೆ ಜನರ ಬಳಿ ಹೋಗುತ್ತೇವೆ.

Advertisement

ವಿಪಕ್ಷಗಳಿಗೆ ಅದರಲ್ಲೂ ಕಾಂಗ್ರೆಸ್ ನವರಿಗೆ ಅಭದ್ರತೆ ಕಾಡುತ್ತಿದ್ದು ಅದಕ್ಕಾಗಿ ಅವಧಿಗೆ ಮುನ್ನ ಚುನಾವಣೆ ಬಗ್ಗೆ ಮಾತನಾಡುತ್ತಿದ್ದಾರೆ. ಮುಖ್ಯವಾಗಿ ಅವರ ಕಾರ್ಯಕರ್ತರನ್ನು ಸಮಾಧಾನ ಪಡಿಸಲು ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next