Advertisement

ಹಿಂದಿ ಹೇರಿಕೆಯಿಲ್ಲ, ಈ ಬಾರಿಯ ನಾಮಫಲಕಗಳು ಕನ್ನಡದಲ್ಲೇ

01:15 PM Jun 20, 2022 | Team Udayavani |

ಬೆಂಗಳೂರು: ಕೇಂದ್ರ ಸರಕಾರದ ಪ್ರತಿನಿಧಿಗಳು ಭಾಗವಹಿಸುವ ರಾಜ್ಯದ ಕಾರ್ಯಕ್ರಮಗಳಲ್ಲಿ ಹಿಂದಿ ಹೇರಿಕೆಯಾಗುತ್ತಿದೆ ಎಂಬ ಆರೋಪಕ್ಕೆ ಈ ಬಾರಿ ತೆರೆ‌ ಬಿದ್ದಿದೆ.

Advertisement

ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿದ ಮೊದಲ ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಇಂಗ್ಲೀಷ್ ಗೆ ಮಾತ್ರ ಆದ್ಯತೆ ನೀಡಲಾಗಿದೆ.

ಐಐಎಸ್ ಸಿ ಆವರಣದಲ್ಲಿ ಆಯೋಜಿಸಿದ್ದ ಮೊದಲ ಕಾರ್ಯಕ್ರಮ ಮಿದುಳು ಸಂಶೋಧನಾ ಕೇಂದ್ರ ಉದ್ಘಾಟನೆ ಹಾಗೂ ಬಾಗ್ಚಿ- ಪಾರ್ಥಸಾರಥಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗಾಗಿ ಶಿಲಾನ್ಯಾಸ ನೆರವೇರಿಸುವ ಸಂದರ್ಭದಲ್ಲಿ ಫಲಕಗಳನ್ನು ಇಂಗ್ಲೀಷ್ ಹಾಗೂ ಕನ್ನಡದಲ್ಲಿ ಮಾತ್ರ ಕೆತ್ತಲಾಗಿತ್ತು. ಎಲ್ಲಿಯೂ ಹಿಂದಿ ಅವತರಣಿಕೆಗಳು ಇರಲಿಲ್ಲ. ಈ ಕಾರ್ಯಕ್ರಮ ಉದ್ಘಾಟನೆ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಜತೆಗಿದ್ದರು.

ಇದನ್ನೂ ಓದಿ:ಮೋದಿ ಪ್ರವಾಸದಲ್ಲಿ ಯಾವುದೇ ರಾಜಕೀಯ ಭೇಟಿಗೆ ಅವಕಾಶವಿಲ್ಲ

ಐಐಎಸ್ ಸಿಗೆ ಆಗಮಿಸುವ ಮುನ್ನ ಮಾರ್ಗ ಮಧ್ಯೆ ಕಾರ್ಯಕರ್ತರು ಮೇಖ್ರಿ ವೃತ್ತದ ಬಳಿ ಮೋದಿ ಮೋದಿ ಎಂದು ಘೋಷಣೆ ಕೂಗಿದಾಗ ವಾಹನದ ವೇಗ ಕಡಿಮೆ ಮಾಡಿ ಮೋದಿ ಕಾರ್ಯಕರ್ತರತ್ತ ಕೈಬೀಸಿ ಮುಂದೆ ಸಾಗಿದರು.

Advertisement

Advertisement

Udayavani is now on Telegram. Click here to join our channel and stay updated with the latest news.

Next