Advertisement

ಪಕ್ಷ ಭೇದವಿಲ್ಲದೆ ಸರ್ವತೋಮುಖ ಅಭಿವೃದ್ಧಿ

11:40 AM May 05, 2018 | |

ಕೆ.ಆರ್‌.ಪುರ: ಕ್ಷೇತ್ರದ ಬಿಜೆಪಿ ಹಿರಿಯ ಮುಖಂಡ ರಾಮಚಂದ್ರಪ್ಪ ಮತ್ತು ಅವರ ನೂರಾರು ಬೆಂಬಲಿಗರು ಶುಕ್ರವಾರ ಶಾಸಕ ಬಿ.ಎ.ಬಸವರಾಜ ನೇತೃತ್ವದಲ್ಲಿ ಕಾಂಗ್ರೆಸ್‌ ಸೇರಿದರು.

Advertisement

ನಂತರ ಮಾತನಾಡಿದ ಶಾಸಕ ಬಿ.ಎ.ಬಸವರಾಜ, ನಾನು ಶಾಸಕನಾದ ನಂತರ ಕ್ಷೇತ್ರದಲ್ಲಿ ಪಕ್ಷ ಭೇದ ಮಾಡದೆ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತಿದ್ದು, ಸರ್ಕಾರದಿಂದ ಸಾಕಷ್ಟು ಅನುದಾನ ತಂದು ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೊಂಡಿದ್ದೇನೆ. ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರ ಕೈಗೊಂಡಿರುವ ಜನಪರ ಕಾರ್ಯಕ್ರಮಗಳು ಮತ್ತು ಪಕ್ಷದ ತತ್ವ ಸಿದ್ಧಾಂತ ಮೆಚ್ಚಿ ಬಿಜೆಪಿ ಮುಖಂಡರು ಕಾಂಗ್ರೆಸ್‌ ಸೇರಿದ್ದಾರೆ ಎಂದರು.

ದೇಶದ ಸ್ವಾತಂತ್ರ್ಯಕ್ಕಾಗಿ ಬಲಿದಾನ ನೀಡಿದ ರ್ಶರೇಷ್ಠ ಇತಿಹಾಸವಿರುವ ಪಕ್ಷ ಕಾಂಗ್ರೆಸ್‌. ಇಂತಹ ಪಕ್ಷದ ತತ್ವ, ಸಿದ್ಧಾಂತಗಳನ್ನು ಒಪ್ಪಿ ಬರುವ ಅನ್ಯ ಪಕ್ಷಗಳ ಕಾರ್ಯಕರ್ತರನ್ನು ಎಂದಿಗೂ ಕಡೆಗಣಿಸುವುದಿಲ್ಲ. ಪ್ರಸ್ತುತ ಪಕ್ಷ ಸೇರಿರುವ ಮುಖಂಡರಿಗೆ ಮುಂದಿನ ದಿನಗಳಲ್ಲಿ ಸೂಕ್ತ ಸ್ಥಾನಮಾನ ನೀಡುವುದಾಗಿ ತಿಳಿಸಿದರು.

ಐದು ವರ್ಷ ಅವಧಿಯಲ್ಲಿ ರಾಜ್ಯ ಸರ್ಕಾರ ಅನುಷ್ಠಾನಗೊಳಿಸಿದ್ದ ಹಲವಾರು ಯೋಜನೆಗಳನ್ನು ಪೂರ್ಣಗೊಳಿಸುವ ಮೂಲಕ ಕಾಂಗ್ರೆಸ್‌ ಜನರ ನಂಬಿಕೆ ಗಳಿಸಿದ್ದೆ. ಮುಂದಿನ ಹಂತದ ಯೋಜನೆಗಳನ್ನು ರೂಪಿಸಿ ರಾಜ್ಯ ಹಾಗೂ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಮತ್ತೂಮ್ಮೆ ತಮ್ಮನ್ನು ಚುನಾಯಿಸುವಂತೆ ಮನವಿ ಮಾಡಿದರು.

ಟ್ರಾಫಿಕ್‌ಗೆ ಪರಿಹಾರ: ಕೆ.ಆರ್‌.ಪುರ ಕ್ಷೇತ್ರದಲ್ಲಿ ಸಂಚಾರ ದಟ್ಟಣೆ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಲು ಬದ್ಧನಾಗಿದ್ದೇನೆ. ಶಾಸಕನಾದ ಆರು ತಿಂಗಳೊಳಗೆ ಒಳಚರಂಡಿ ವ್ಯವಸ್ಥೆ ಮತ್ತು ಕಾವೇರಿ ನೀರು ಪ್ರತಿ ಮನೆಮನೆಗೆ ತಲುಪಿಸುವ ಕಾರ್ಯವನ್ನು ಮಾಡುತ್ತೇನೆ. ಕೆ.ಆರ್‌.ಪುರ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಪಣ ತೊಟ್ಟಿದ್ದೇನೆ ಎಂದು ಹೇಳಿದರು.

Advertisement

ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದ ರಾಮಚಂದ್ರಪ್ಪ ಮಾತನಾಡಿ, ಶಾಸಕ ಬೈರತಿ ಬಸವರಾಜ ಅವರು ಪಕ್ಷ ಭೇದವಿಲ್ಲದೆ ಕ್ಷೇತ್ರದಲ್ಲಿ ಪ್ರಮಾಣಿಕವಾಗಿ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿರುವುದನ್ನು ಮೆಚ್ಚಿ ಕಾಂಗ್ರೆಸ್‌ ಸೇರಿರುವುದಾಗಿ ತಿಳಿಸಿದರು. ಈ ವೇಳೆ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಮುನೇಗೌಡ, ಪಾಲಿಕೆ ಸದಸ್ಯೆ ರಾಧಮ್ಮ ವೆಂಕಟೇಶ್‌, ವಿ.ಡಿ.ಎಸ್‌.ಪ್ರದೀಪ್‌ಕುಮಾರ್‌, ವೆಂಕಿ, ಇಟಾಚಿ ಮಂಜುನಾಥ್‌ ಮತ್ತಿತ್ತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next