Advertisement

ಶರಣಗೌಡರನ್ನು ಎಲ್ಲರೂ ಬೆಂಬಲಿಸಿ

05:08 PM Dec 07, 2021 | Team Udayavani |

ಸಿಂಧನೂರು: ಕಾಂಗ್ರೆಸ್‌ ಅಭ್ಯರ್ಥಿ ಶರಣಗೌಡ ಬಯ್ನಾಪುರ ಅವರು ಗ್ರಾಮ ಪಂಚಾಯತ್‌ಗಳ ಬೇಡಿಕೆಗಳನ್ನು ಈಡೇರಿಸುವ ಸಾಮರ್ಥ್ಯ ಹೊಂದಿದ್ದು, ಅವರನ್ನು ಬೆಂಬಲಿಸಲು ಎಲ್ಲ ಸದಸ್ಯರು ಒಮ್ಮತದಿಂದ ಕೆಲಸ ಮಾಡಬೇಕು ಎಂದು ಕೆಪಿಸಿಸಿ ಮಾಜಿ ಕಾರ್ಯದರ್ಶಿ ಕೆ.ಕರಿಯಪ್ಪ ಹೇಳಿದರು.

Advertisement

ತಾಲೂಕಿನ ಗೋಮರ್ಸಿ ಗ್ರಾಮದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಶರಣಗೌಡ ಬಯ್ನಾಪುರ ಪರವಾಗಿ ಹಮ್ಮಿಕೊಂಡ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.

ಗೋಮರ್ಸಿ ಗ್ರಾಮದ ನಿರುಪಾದೇಶ್ವರ ಮಠಕ್ಕೆ ಭೇಟಿ ನೀಡಿದ ಬೆಂಬಲಿಗರ ಸಭೆ ನಡೆಸಿದರು. ಕಾಂಗ್ರೆಸ್‌ ಅಭ್ಯರ್ಥಿಯ ಪರವಾಗಿ ಮತ ಚಲಾಯಿಸುವಂತೆ ಮನವಿ ಮಾಡಿದರು. ಮಾಡಸಿರವಾರ ಗ್ರಾಪಂ ಅಧ್ಯಕ್ಷ ಶ್ರೀನಿವಾಸ ಸೇರಿದಂತೆ ಗ್ರಾಪಂ ಸದಸ್ಯರು, ಗ್ರಾಮದ ಮುಖಂಡರು ಇದ್ದರು.

ಹೆಡಗಿನಾಳ ಗ್ರಾಮಕ್ಕೆ ಭೇಟಿ ನೀಡಿದ ವೇಳೆ ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರ ಸಭೆಯನ್ನು ಕರೆದು ಅವರೊಂದಿಗೆ ಚರ್ಚಿಸಿದರು. ಬಳಿಕ ಗೋನವಾರ ಗ್ರಾಪಂ ವ್ಯಾಪ್ತಿಯ ಹುಲುಗುಂಚಿ ಗ್ರಾಪಂ ಸದಸ್ಯರ ಸಭೆಯನ್ನು ಆಯೋಜಿಸಿ, ಶರಣಗೌಡ ಬಯ್ನಾಪುರ ಪರವಾಗಿ ಮತ ಚಲಾಯಿಸುವಂತೆ ಮನವಿ ಮಾಡಿದರು.

Advertisement

Udayavani is now on Telegram. Click here to join our channel and stay updated with the latest news.

Next