Advertisement

ಪಕ್ಷಕ್ಕೆ ಬರುವವರನ್ನೆಲ್ಲ ಸೇರಿಸಿಕೊಳ್ಳಲು ಆಗುವುದಿಲ್ಲ: ಎಂ.ಬಿ.ಪಾಟೀಲ್

09:26 PM Jun 12, 2020 | Sriram |

ಬೆಂಗಳೂರು: ಕಾಂಗ್ರೆಸ್‌ಗೆ ಬರುತ್ತೇನೆ ಎನ್ನುವವರನ್ನೆಲ್ಲ ಸೇರಿಸಿಕೊಳ್ಳಲು ಆಗುವುದಿಲ್ಲ. ಅದಕ್ಕಾಗಿ ಪಕ್ಷದ ವತಿಯಿಂದ ಸಮಿತಿ ರಚನೆ ಮಾಡಲಾಗಿದೆ ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ್‌ ಹೇಳಿದ್ದಾರೆ.

Advertisement

ಮಾಜಿ ಸಚಿವ ರೋಷನ್‌ ಬೇಗ್‌ ಮತ್ತೆ ಕಾಂಗ್ರೆಸ್‌ ಸೇರಲು ಆಸಕ್ತರಾಗಿದ್ದಾರೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್‌ಗೆ ಬರುತ್ತೇವೆ ಎಂದ ಮಾತ್ರಕ್ಕೆ ಕರೆದುಕೊಳ್ಳಲು ಆಗುವುದಿಲ್ಲ. ಅದಕ್ಕೆಂದೇ ಒಂದು ಸಮಿತಿ ಇದೆ. ಬರುವವರಿಂದ ನಮಗೆ ಹಾನಿಯಾಗಬಾರದು. ಹೋಗುವಾಗ ಏನು ಹಾನಿ ಮಾಡಿದ್ದಾರೆ ಎಂದು ನೋಡಬೇಕಾಗುತ್ತದೆ ಎಂದು ಹೇಳಿದರು.

ರೋಷನ್‌ ಬೇಗ್‌ ಅವರು ಬರುತ್ತಾರೆಯೋ ಇಲ್ಲವೋ ಗೊತ್ತಿಲ್ಲ. ಬಹಶಃ ಅವರು ನಮ್ಮ ನಾಯಕರ ಜತೆ ಚರ್ಚೆ ಮಾಡಿರಬಹುದು ಆದರೂ ಪಕ್ಷದ ಚೌಕಟ್ಟಿನಲ್ಲಿ ಮೊದಲು ಚರ್ಚೆ ಮಾಡಬೇಕು. ಅನಂತರ ಹಿರಿಯರು ತೀರ್ಮಾನ ಮಾಡುತ್ತಾರೆ ಎಂದರು.

ಬಿಜೆಪಿಯಲ್ಲಿ ಅಸಮಾಧಾನ ಇರುವುದು ಆ ಪಕ್ಷದ ಆಂತರಿಕ ವಿಚಾರ ಮುಖ್ಯಮಂತ್ರಿ ಯಡಿಯೂರಪ್ಪ ಮಾಡಿದ “ಆಪರೇಷನ್‌ ಕಮಲ’ ಅವರಿಗೆ ಮುಳುವಾಗಿದೆ. ಅವರ ಆಂತರಿಕ ವಿಚಾರದ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ ಎಂದು ಹೇಳಿದರು.

 

Advertisement
Advertisement

Udayavani is now on Telegram. Click here to join our channel and stay updated with the latest news.

Next